ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 12:34 pm
HK News Desk
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm