ಬ್ರೇಕಿಂಗ್ ನ್ಯೂಸ್
17-01-21 02:17 pm Source: FILMIBEAT ಸಿನಿಮಾ
ಬಾಲಿವುಡ್ ನಟಿ ಕಂಗನಾ ರಣಾವತ್ ವಿವಾದಗಳಿಂದ ದೂರ ಆಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದಲ್ಲೊಂದು ವಿವಾದಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಂದು ವಿವಾದದಲ್ಲಿ ಕಂಗನಾ ಸಿಲುಕಿಕೊಂಡಿದ್ದಾರೆ. ಕ್ವೀನ್ ನಟಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪ ಕೇಳಿಬಂದಿದೆ. ಕಂಗನಾ ಇತ್ತೀಚಿಗಷ್ಟೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು. 'ಮಣಿಕರ್ಣಿಕಾ; ದಿ ಲೆಜೆಂಡ್ ಆಫ್ ದಿಡ್ಡಾ' ಎಂಬ ಹೆಸರಿನ ಚಿತ್ರದಲ್ಲಿ ಕಾಶ್ಮೀರದ ರಾಣಿಯಾಗಿ ನಟಿಸುವುದಾಗಿ ಕಂಗನಾ ಘೋಷಣೆ ಮಾಡಿದ್ದರು. ಸಿನಿಮಾ ಘೋಷಣೆಯಾದ ಬೆನ್ನಲ್ಲೇ ವಿವಾದವೂ ಬೆನ್ನತ್ತಿದೆ. ಕಂಗನಾ ಕಥೆ ಕದ್ದಿದ್ದಾರೆ ಎಂದು ಲೇಖಕ ಆಶಿಶ್ ಕೌಲ್ ಆರೋಪಿಸಿ ಕಂಗನಾಗೆ ನೋಟಿಸ್ ನೀಡಲಾಗಿದೆ.
ದಿಡ್ಡಾ- ಕಾಶ್ಮೀರ್ ಕೀ ಯೋಧಾ ರಾಣಿ' ಪುಸ್ತಕಕ್ಕೆ ಮುನ್ನುಡಿ ಬರೆದುಕೊಡುವಂತೆ ಕಂಗನಾಗೆ ಈ ಹಿಂದೆ ಮೇಲ್ ಮಾಡಿದ್ದೆ, ಆದರೆೆ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುನ್ನುಡಿ ಬದಲು, ಅದನ್ನೇ ಸಿನಿಮಾ ಮಾಡಲು ಮುಂದಾಗಿದ್ದಾರೆ ಎಂದು ಲೇಖಕ ಆಶಿಶ್ ಆರೋಪಿಸಿದ್ದಾರೆ.
ನೋಟಿಸ್ ನಲ್ಲಿ ಕಂಗನಾಗೆ 72 ಗಂಟೆಯಲ್ಲಿ ಉತ್ತರ ನೀಡುವಂತೆ ಕೇಳಿಕೊಂಡಿದ್ದಾರೆ. ಇಲ್ಲವಾದರೇ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಕಮಲ್ ಜೈನ್ ಕಥೆ ಕದ್ದು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಅವರ ಸಿನಿಮಾ ಪುಸ್ತಕವನ್ನು ಆಧರಿಸಿದೆ ಎಂದು ಲೇಖಕ ಆಶೀಶ್ ಆರೋಪಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ಕಥೆ ಕದ್ದ ಆರೋಪ ಮಾಡಿದ ಬಳಿಕ ಕಂಗನಾ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ, ನಿಂದನೆ ಮಾಡುತ್ತಿದ್ದಾರೆ. ಇದರಿಂದ ತೀವ್ರ ಮಾನಸಿಕ ಯಾತನೆ ಅನುಭವಿಸಿರುವುದಾಗಿಯೂ ಅಶಿಶ್ ಹೇಳಿದ್ದಾರೆ.
ಅಲ್ಲದೆ ಈ ಪುಸ್ತಕ ಈಗಾಗಲೇ ಸಿನಿಮಾವಾಗಲು ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. 2017ರಲ್ಲೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾರೆ. ಇದೀಗ ಕಂಗನಾ ಕಡೆಯಿಂದ ಯಾವ ಪ್ರತಿಕ್ರಿಯೆ ಬರಲಿದೆ ಎನ್ನುವ ಕಾತರ ಅಭಿಮಾನಿಗಲ್ಲಿದೆ. ಸಿನಿಮಾ ಪ್ರಾರಂಭಕ್ಕೂ ಮುನ್ನವೇ ಎದುರಾಗಿರುವ ವಿಘ್ನ ನಿವಾರಣೆಯಾಗುತ್ತಾ ಕಾದುನೋಡಬೇಕು.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm