ಬ್ರೇಕಿಂಗ್ ನ್ಯೂಸ್
17-01-21 02:24 pm Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಮಾನವೀಯ ಕೆಲಸಗಳು ಮುಂದುವರೆದಿದೆ. ಒಂದಲ್ಲೊಂದು ವಿಚಾರದ ಮೂಲಕ ಸದಾ ಸುದ್ದಿಯಲ್ಲಿರುವ ನಟ ಸೋನು ಸೂದ್ ಇದೀಗ ಬಟ್ಟೆ ಹೊಲಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ರಸ್ತೆಬದಿಯಲ್ಲಿ ಕುಳಿತು ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಾನವೀಯ ಕೆಲಸಗಳ ಮೂಲಕ ಅಭಿಮಾನಿಗಳ ಪಾಲಿನ ನಿಜವಾದ ದೇವರಾಗಿರುವ ಸೋನು ಸೂದ್ ಅವರನ್ನು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಸರಳತೆಯ ಮೂಲಕವೇ ಎಲ್ಲರ ಮನಗೆದ್ದಿರುವ ಸೋನು ಇದೀಗ ಟೈಲರಿಂಗ್ ಶಾಪ್ ಶುರು ಮಾಡಿಕೊಂಡಿದ್ದಾರೆ.
ಸೋನು ಸೂದ್ ಟೈಲರಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆ ಬದಿಯಲ್ಲಿ, ಬರಿ ಗಾಲಿನಲ್ಲಿ ಹೊಲಿಗೆ ಯಂತ್ರದ ಮೇಲೆ ಕುಳಿತು ಸುಲಲಿತವಾಗಿ ಬಟ್ಟೆ ಹೊಲಿಯುತ್ತಿರುವ ಸೋನು ಸೂದ್ ಗೆ ಅಭಿಮಾನಿಗಳು ಮನಸೋತಿದ್ದಾರೆ.
ಈ ವಿಡಿಯೋವನ್ನು ನಟ ಸೋನು ಸೂದ್ ಅವರೇ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಇದು ಸೋನು ಸೂದ್ ಟೈಲರಿಂಗ್ ಶಾಪ್. ಇಲ್ಲಿ ಉಚಿತವಾಗಿ ಬಟ್ಟೆ ಹೊಲಿದುಕೊಡಲಾಗುತ್ತದೆ' ಎಂದು ಬರೆದುಕೊಂಡಿದ್ದಾರೆ. ಸೋನು ಸೂದ್ ಈ ವಿಡಿಯೋಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಸೋನು ಸೂದ್ ಸದ್ಯ ಮೆಗಾ ಸ್ಟಾರ್ ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚಿಗೆ ಚಿತ್ರೀಕರಣ ಸೆಟ್ ನಲ್ಲಿ ಸೋನು ಸೂದ್ ಸಿಬ್ಬಂದಿಗೆ ಉಚಿತ ಮೊಬೈಲ್ ಗಳನ್ನು ನೀಡಿ ಗಮನ ಸೆಳೆದಿದ್ದರು.
This News Article is a Copy of FILMIBEAT
Sonu Sood tailor shop.
— sonu sood (@SonuSood) January 16, 2021
यहां मुफ्त में सिलाई की जाती है।
पैंट की जगह निकर बन जाए, इसकी हमारी गारंटी नहीं 😂 pic.twitter.com/VCBocpUSum
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm