ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm