ಬ್ರೇಕಿಂಗ್ ನ್ಯೂಸ್
18-01-21 01:23 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್, ಡಿಂಪಲ್ ಕಪಾಡಿಯ, ಸುನಿಲ್ ಗ್ರೋವರ್, ಗೌಹರ್ ಖಾನ್ ಸೇರಿದಂತೆ ಅನೇಕ ಖ್ಯಾತ ಕಲಾವಿದರು ನಟಿಸಿರುವ ಬಹುನಿರೀಕ್ಷೆಯ ವೆಬ್ ಸೀರಿಸ್ 'ತಾಂಡವ್' ವಿವಾದಕ್ಕೆ ಸಿಲುಕಿದೆ. ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿರುವ ತಾಂಡವ್ ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರು ಸಿಡಿದೆದಿದ್ದಾರೆ. ರಾಜಕೀಯ ಕಥಾಹಿನ್ನಲೆ ಇರುವ ಈ ಸರಣಿಯಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿ, ತಾಂಡವ್ ವೆಬ್ ಸರಣಿಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಟ ಸೈಫ್ ಅಲಿ ಖಾನ್ ಅವರನ್ನು ಕಟುವಾಗಿ ಟೀಕಿಸಿದ ಬಿಜೆಪಿ ನಾಯಕ ರಾಮ್ ಕದಮ್, ಹಿಂದೂ ಧಾರ್ಮಿಕ ಭಾವನೆಗಳನ್ನು ನೋಯಿಸುವ ಸರಣಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದಿದ್ದಾರೆ.
ತಾಂಡವ್ ನಲ್ಲಿ ಶಿವನ ಕುರಿತು ಒಂದು ದೃಶ್ಯವಿದೆ. ಆ ದೃಶ್ಯದಲ್ಲಿ ನಟ ಮೊಹಮ್ಮದ್ ಜೆಶಾನ್ ಆಯೂಬ್, ಕೈಯಲ್ಲಿ ಶಿವನ ತ್ರಿಶೂಲ ಮತ್ತು ಡಮರುಗವನ್ನು ಹಿಡಿದು ಕೊಂಡಿದ್ದಾರೆ. ಆದರೆ ಅದನ್ನು ಆಕ್ಷೇಪಾರ್ಹವಾಗಿ ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ದೂರು ನೀಡಿರುವ ಬಿಜೆಪಿ ನಾಯಕ ರಾಮ್ ಕದಮ್ 'ಬಾಲಿವುಡ್ ನ ಕೆಲವು ಸಿನಿಮಾಗಳು ಮತ್ತು ವೆಬ್ ಸೀರಿಸ್ ಗಳಲ್ಲಿ ಹಿಂದೂ ದೇವರನ್ನು ಅಗೌರವ ಗೊಳಿಸಲಾಗುತ್ತಿದೆ ಯಾಕೆ? ತಾಂಡವ್ ನಲ್ಲಿ ಒಬ್ಬ ನಟ ಶಿವನನ್ನು ಗೇಲಿ ಮಾಡಿದ್ದಾರೆ. ಹಿಂದೂ ದಾರ್ಮಿಕ ಭಾವನೆಗೆ ಅಗೌರವ ತಂದಿದ್ದಾರೆ. ಈ ಭಾಗವನ್ನು ತೆಗೆದು ಹಾಕಬೇಕು ಅಲ್ಲದೆ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು.
ಬದಲಾವಣೆ ಮಾಡುವವರೆಗೂ ಬಿಜೆಪಿ ತಾಂಡವ್ ಅನ್ನು ಬಹಿಷ್ಕರಿಸುತ್ತದೆ' ಎಂದು ಹೇಳಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸರನ್ನು ಭೇಟಿಯಾಗಿರುವ ರಾಮ್ ಕದಮ್ ಮುಂಬೈನ ಘಾಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಬಿಜೆಪಿ ಶಾಸಕ ರಾಮ್ ಕದಮ್ ದೂರು ದಾಖಲಿಸಿದ್ದಾರೆ. ತಾಂಡವ್ ವೆಬ್ ಸರಣಿಗೆ ಅಲಿ ಅಬ್ಬಾಸ್ ಜಾಫರ್ ನಿರ್ದೇಶನ ಮಾಡಿದ್ದಾರೆ. ಈ ಸರಣಿ ಅಮೆಜಾನ್ ಪ್ರೈಮ್ ನಲ್ಲಿ ಜನವರಿ 15ರಂದು ರಿಲೀಸ್ ಆಗಿದ್ದು, ಒಟ್ಟು 9 ಎಪಿಸೋಡ್ ಗಳಿವೆ. ನಟ ಸೈಫ್ ಅಲಿ ಖಾನ್ ಸಮರ ಪ್ರತಾಪ್ ಸಿಂಗ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm