ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm