ಬ್ರೇಕಿಂಗ್ ನ್ಯೂಸ್
20-01-21 11:47 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿಯ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇಬ್ಬರು ಮಕ್ಕಳನ್ನು ಬೆಳ್ಳಿತೆರೆ ಮೇಲೆ ನೋಡಬೇಕು ಎಂದು ನಟಿ ಶ್ರೀದೇವಿ ಕನಸು ಕಂಡಿದ್ದರು. ಆದರೆ ವಿಧಿ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮೊದಲ ಮಗಳು ಜಾಹ್ನವಿ ಕಪೂರ್ ಚೊಚ್ಚಲ ಸಿನಿಮಾ ನೋಡುವ ಅವಕಾಶ ಸಹ ಶ್ರೀದೇವಿಗೆ ಸಿಕ್ಕಿಲ್ಲ. ಅಂದಹಾಗೆ ಜಾಹ್ನವಿ ಸದ್ಯ ಬಾಲಿವುಡ್ ನಲ್ಲಿ ಸಕ್ರೀಯರಾಗಿದ್ದಾರೆ. ಧಡಕ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಜಾಹ್ನವಿ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಕ್ಕನ ಬಳಿಕ ಇದೀಗ ತಂಗಿ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಖುಷಿ ಕಪೂರ್ ಬಾಲಿವುಡ್ ಎಂಟ್ರಿ ಬಗ್ಗೆ ತಂದೆ ಬೋನಿ ಕಪೂರ್ ಮಾಹಿತಿ ನೀಡಿದ್ದಾರೆ. ಆಂಗ್ಲ ವೆಬ್ ಪೋರ್ಟಲ್ ಜೊತೆ ಮಾತನಾಡಿದ ಬೋನಿ ಕಪೂರ್, 'ನನ್ನ ಬಳಿ ನಿರ್ಮಾಣ ಮಾಡುವ ಸಾಮರ್ಥ್ಯವಿದೆ. ಆದರೆ ಅವಳು ಬೇರೆ ನಿರ್ಮಾಣ ಸಂಸ್ಥೆಯಿಂದ ಎಂಟ್ರಿ ಕೊಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ನಾನು ಅವಳ ತಂದೆ, ಕಂಫರ್ಟ್ ನಿಂದ ಹೊರಬಂದು ಅವಳು ಸಿನಿಮಾ ಮಾಡಬೇಕು' ಎಂದು ಹೇಳಿದ್ದಾರೆ.
'ಬಾಲಿವುಡ್ ನಲ್ಲಿ ಅವಳು ಅವಳದೇ ಆದ ಹೆಜ್ಜೆ ಕಂಡುಕೊಳ್ಳಬೇಕು ಎನ್ನುವುದು ನನ್ನ ಬಯಕೆ. ಸುರಕ್ಷಿತ ಎಂದು ಭಾವಿಸುವ ಯಾರಾದರು ಅವಳನ್ನು ಲಾಂಚ್ ಮಾಡಬಹುದು' ಎಂದು ಹೇಳಿದ್ದಾರೆ. ಅಂದಹಾಗೆ ಖುಷಿ ಈಗಾಗಲೇ ಬಾಲಿವುಡ್ ಎಂಟ್ರಿಗೆ ತಯಾರಿ ಮಾಡಿಕೊಂಡಿದ್ದಾರೆ. ಯುಎಸ್ ನಲ್ಲಿ ನಟನೆಯ ತರಬೇತಿ ಕಲಿತು ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ವೀವ್ ಆಗಿರುವ ಖುಷಿ ಆಗಾಗ ಸುಂದರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಖುಷಿ ಯಾವ ಸಿನಿಮಾದ ಮೂಲಕ ಬಣ್ಣ ಹಚ್ಚಲಿದ್ದಾರೆ, ನಿರ್ದೇಶಕ, ನಿರ್ಮಾಪಕ, ಸಹ ನಟ ಯಾರಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂದಹಾಗೆ ಶ್ರೀದೇವಿ ಮೊದಲ ಪುತ್ರಿ ಜಾಹ್ನವಿ ಕಪೂರ್ ಕೊನೆಯಾದಾಗಿ ಗುಂಜನ್ ಸಕ್ಸೇನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸದ್ಯ ದೋಸ್ತಾನ-2, ರೂಹಿ ಅಫ್ಜಾನಾ, ಗುಡ್ ಲಕ್ ಜೆರ್ರಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm