ಬ್ರೇಕಿಂಗ್ ನ್ಯೂಸ್
20-01-21 12:28 pm Source: FILMIBEAT ಸಿನಿಮಾ
ದಿಯಾ ಸಿನಿಮಾ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರ ಮನ ಗೆದ್ದಿರುವ ನಟ ಪೃಥ್ವಿ ಅಂಬರ್ ಈಗ ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ದಿಯಾ ಸಿನಿಮಾದ ಆದಿ ಪಾತ್ರದ ಮೂಲಕ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿರುವ ಪೃಥ್ವಿ ಸದ್ಯ ಸಾಲು ಸಾಲು ಕನ್ನಡದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಕನ್ನಡ ಸಿನಿಮಾಗಳ ಜೊತೆಗೆ ಹಿಂದಿ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ಪೃಥ್ವಿ ಹಿಂದಿಯಲ್ಲಿ ಮಿಂಚಲು ಸಜ್ಜಾಗಿರುವುದು ದಿಯಾ ಸಿನಿಮಾದ ರಿಮೇಕ್ ನಲ್ಲಿ. ಹೌದು, ಕನ್ನಡದ ಸೂಪರ್ ಹಿಟ್ ದಿಯಾ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗುತ್ತಿದೆ. ಹಿಂದಿ ರಿಮೇಕ್ ನಲ್ಲೂ ಪೃಥ್ವಿ ಆದಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಈ ಮೂಲಕ ಪೃಥ್ವಿ ಆದಿಯಾಗಿ ಮತ್ತೆ ಹಿಂದಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ವಿಶೇಷ ಎಂದರೆ ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ನಟ ಪೃಥ್ವಿ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿರುವ ಪೃಥ್ವಿ ಲಕ್ನೋದಲ್ಲಿರುವ ಫೋಟೋ ಹಂಚಿಕೊಂಡಿದ್ದಾರೆ.
ಕೆಎಸ್ ಅಶೋಕ್ ನಿರ್ದೇಶನದ ದಿಯಾ ಸಿನಿಮಾದಲ್ಲಿ ಖುಷಿ ರವಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ದೀಕ್ಷಿತ್ ಶೆಟ್ಟಿ ಮತ್ತು ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಮಿಂಚಿದ್ದರು. 2020 ಪ್ರಾರಂಭದಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾಗೆ ಕನ್ನಡ ಚಿತ್ರಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರಮಂದಿರಗಳಲ್ಲಿ ಮಾತ್ರವಲ್ಲದೆ ಒಟಿಟಿಯಲ್ಲಿ ರಿಲೀಸ್ ಆದಾಗಲು ಜನ ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದರು. ಕರ್ನಾಟಕದಲ್ಲಿ ಮಾತ್ರವಲ್ಲದೆ ಬೇರೆ ಬೇರೆ ಭಾಷೆಯಲ್ಲೂ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಹಿಂದಿ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗುತ್ತಿದೆ.
ಹಿಂದಿಯಲ್ಲಿ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ, ಮತ್ತೋರ್ವ ನಾಯಕ ಯಾರು ಎನ್ನುವ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ಮೂಲಗಳ ಪ್ರಕಾರ ಹೊಸ ಪ್ರತಿಭೆಗಳನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ದಿಯಾ ಹಿಂದಿ ರಿಮೇಕ್ ಚಿತ್ರೀಕರಣವನ್ನು ಡೆಹರಾಡೂನ್ ಮತ್ತು ಮಸ್ಸೂರಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm