ಬ್ರೇಕಿಂಗ್ ನ್ಯೂಸ್
23-01-21 12:36 pm Source: FILMIBEAT Manjunatha C ಸಿನಿಮಾ
ಶಿವಮೊಗ್ಗದಲ್ಲಿ ನಡೆದ ಘಟನೆ ನಂತರ ಹಲವರು ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಕಲ್ಲುಗಣಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದಾರೆ. ಕಲ್ಲು ಗಣಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಹಲವರು ಸಂತಾಪ ಸೂಚಿಸಿದ್ದು, ಗಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ದಾರೆ. ನಟಿ, ಮಂಡ್ಯ ಸುಮಲತಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ' ಎಂದಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸ್ಪೋಟದಿಂದ ಸಂಭವಿಸಿರುವ ಸಾವುಗಳು ತೀವ್ರ ದುಃಖ ಹಾಗೂ ಸಂಕಟ ತಂದಿವೆ. ಮೃತರಾದ ಅಮಾಯಕರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರಾದೃಷ್ಟ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನ ಮೂಲಕ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಮರಳಿ ಬರುವುದಿಲ್ಲ' ಎಂದಿದ್ದಾರೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆಯಲ್ಲಿ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ದನಿ ಎತ್ತುತ್ತಿರುವುದು ಸಹ ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಕಾನೂನು ಬಾಹಿರ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಲಿ ಎಂದಿದ್ದಾರೆ. ಅಕ್ರಮ ಗಣಿಗಾರಿಕೆ ಹಿಂದೆ ಬಹಳಸಲ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಬೆಂಬಲ ಇದ್ದೇ ಇರುತ್ತದೆ. ಸರಕಾರ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿ, ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು ಎಂದಿದ್ದಾರೆ.
ನಟ ಸುದೀಪ್ ಸಹ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ , ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ ಸುದೀಪ್.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm