ಬ್ರೇಕಿಂಗ್ ನ್ಯೂಸ್
 
            
                        23-01-21 12:36 pm Source: FILMIBEAT Manjunatha C ಸಿನಿಮಾ
 
            ಶಿವಮೊಗ್ಗದಲ್ಲಿ ನಡೆದ ಘಟನೆ ನಂತರ ಹಲವರು ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಕಲ್ಲುಗಣಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದಾರೆ. ಕಲ್ಲು ಗಣಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಹಲವರು ಸಂತಾಪ ಸೂಚಿಸಿದ್ದು, ಗಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ದಾರೆ. ನಟಿ, ಮಂಡ್ಯ ಸುಮಲತಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ' ಎಂದಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸ್ಪೋಟದಿಂದ ಸಂಭವಿಸಿರುವ ಸಾವುಗಳು ತೀವ್ರ ದುಃಖ ಹಾಗೂ ಸಂಕಟ ತಂದಿವೆ. ಮೃತರಾದ ಅಮಾಯಕರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರಾದೃಷ್ಟ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನ ಮೂಲಕ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಮರಳಿ ಬರುವುದಿಲ್ಲ' ಎಂದಿದ್ದಾರೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆಯಲ್ಲಿ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ದನಿ ಎತ್ತುತ್ತಿರುವುದು ಸಹ ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಕಾನೂನು ಬಾಹಿರ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಲಿ ಎಂದಿದ್ದಾರೆ. ಅಕ್ರಮ ಗಣಿಗಾರಿಕೆ ಹಿಂದೆ ಬಹಳಸಲ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಬೆಂಬಲ ಇದ್ದೇ ಇರುತ್ತದೆ. ಸರಕಾರ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿ, ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು ಎಂದಿದ್ದಾರೆ.
ನಟ ಸುದೀಪ್ ಸಹ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ , ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ ಸುದೀಪ್.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm