ಬ್ರೇಕಿಂಗ್ ನ್ಯೂಸ್
23-01-21 12:36 pm Source: FILMIBEAT Manjunatha C ಸಿನಿಮಾ
ಶಿವಮೊಗ್ಗದಲ್ಲಿ ನಡೆದ ಘಟನೆ ನಂತರ ಹಲವರು ಅಕ್ರಮ ಗಣಿಗಾರಿಕೆ ವಿರುದ್ಧ ಮಾತನಾಡುತ್ತಿದ್ದಾರೆ. ನಿನ್ನೆ ರಾತ್ರಿ ಶಿವಮೊಗ್ಗದ ಕಲ್ಲುಗಣಿಯೊಂದರಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದಾಗಿ ಐವರು ಮೃತಪಟ್ಟಿದ್ದಾರೆ. ಕಲ್ಲು ಗಣಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಗ್ಗೆ ಹಲವರು ಸಂತಾಪ ಸೂಚಿಸಿದ್ದು, ಗಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ದಾರೆ. ನಟಿ, ಮಂಡ್ಯ ಸುಮಲತಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ' ಎಂದಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸ್ಪೋಟದಿಂದ ಸಂಭವಿಸಿರುವ ಸಾವುಗಳು ತೀವ್ರ ದುಃಖ ಹಾಗೂ ಸಂಕಟ ತಂದಿವೆ. ಮೃತರಾದ ಅಮಾಯಕರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರಾದೃಷ್ಟ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನ ಮೂಲಕ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಮರಳಿ ಬರುವುದಿಲ್ಲ' ಎಂದಿದ್ದಾರೆ ಸುಮಲತಾ ಅಂಬರೀಶ್. ಮಂಡ್ಯ ಜಿಲ್ಲೆಯಲ್ಲಿ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ದನಿ ಎತ್ತುತ್ತಿರುವುದು ಸಹ ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಕಾನೂನು ಬಾಹಿರ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಲಿ ಎಂದಿದ್ದಾರೆ. ಅಕ್ರಮ ಗಣಿಗಾರಿಕೆ ಹಿಂದೆ ಬಹಳಸಲ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳ ಬೆಂಬಲ ಇದ್ದೇ ಇರುತ್ತದೆ. ಸರಕಾರ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿ, ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು ಎಂದಿದ್ದಾರೆ.
ನಟ ಸುದೀಪ್ ಸಹ ಘಟನೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಶಿವಮೊಗ್ಗದ ಹುಣಸೋಡಿನಲ್ಲಿ , ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ' ಎಂದು ಟ್ವೀಟ್ ಮಾಡಿದ್ದಾರೆ ಸುದೀಪ್.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm