ಬ್ರೇಕಿಂಗ್ ನ್ಯೂಸ್
25-01-21 03:46 pm Source: FILMIBEAT Manjunatha C ಸಿನಿಮಾ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ. ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm