ಬ್ರೇಕಿಂಗ್ ನ್ಯೂಸ್
25-01-21 04:01 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿತು.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೇವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ ಎನ್ನಲಾಗುತ್ತಿದೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ವರುಣ್ ಮತ್ತು ನತಾಶಾ ಮದುವೆ ಶಾಸ್ತ್ರಗಳು ಜೋರಾಗಿ ನಡೆಯುತ್ತಿದೆ. ಆದರೆ ಯಾವುದೇ ಫೋಟೋಗಳು ಮತ್ತು ವಿಡಿಯೋವನ್ನು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಂಡಿದ್ದರು. ನಿನ್ನ ಭಾನುವಾರ ಮದುವೆ ದಿನ ವರುಣ್ ಮತ್ತು ನತಾಶಾ ಜೋಡಿ ಕ್ಯಾಮರಾ ಮುಂದೆ ಹಾಜರಾಗಿದ್ದರು. ಅಲ್ಲದೆ ವರುಣ್ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ, 'ಜೀವನ ಪರ್ಯಂತ ಪ್ರೀತಿಯು ಅಧಿಕೃತವಾಯಿತು' ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ಗಣ್ಯರು ವಿಶ್
ಈ ಸುಂದರ ಜೋಡಿಗೆ, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ನೇಹಾ ದೂಪಿಯಾ, ಶಾಹಿದ್ ಕಪೂರ್, ಕರಿಶ್ಮಾ ಕಪೂರ್ ಸೇರಿದಂತೆ ಬಾಲಿವುಡ್ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ವಿಶ್ ಮಾಡತ್ತಿದ್ದಾರೆ.

ಬಳಿ ಬಣ್ಣದ ಉಡುಪಿನಲ್ಲಿ ನವ ಜೋಡಿ ಮಿಂಚಿಂಗ್
ನಟ ವರುಣ್ ಧವನ್ ನೀಲಿ ಮತ್ತು ಬಿಳಿ ಬಣ್ಣದ ಶೇರ್ವಾನಿ ಧರಿಸಿದ್ದರು. ವರುಣ್ ಪತ್ನಿ ನತಾಶಾ ಬಳಿ ಬಣ್ಣದ ಹೆಚ್ಚು ಎಂಬ್ರಾಯಿಡರಿ ವರ್ಕ್ ಇರುವ ಲೆಹೆಂಗಾದಲ್ಲಿ ಕಂಗೊಳಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಮುಂಚಿತವಾಗಿಯೆ ವರುಣ್ ಮತ್ತು ನತಾಶಾ ಕುಟುಂಬ ಅಲಿಬಾಗ್ ಗೆ ತೆರಳಿದ್ದರು.

ನತಾಶಾ ದಲಾಲ್ ಯಾರು?
ನತಾಶಾ ದಲಾಲ್ ಖ್ಯಾತ ಉದ್ಯಮಿ ರಾಜೇಶ್ ದಲಾಲ್ ಪುತ್ರಿ. ನತಾಶಾ ತಾಯಿ ಗೌರಿ ದಲಾಲ್, ಅವರೂ ಸಹ ಉದ್ಯಮಿ. ನತಾಶಾ ಅವರದ್ದು ಉದ್ಯಮಿಗಳ ಕುಟುಂಬ. ನತಾಶಾ ಸಹ ಸ್ವಂತ ಫ್ಯಾಷನ್ ಬ್ರ್ಯಾಂಡ್ ಅನ್ನು ಹೊಂದಿದ್ದಾರೆ. ಅದರ ಹೆಸರು 'ನತಾಶಾ ದಲಾಲ್ ಲೇಬಲ್'. ನತಾಶಾ ಮತ್ತು ವರುಣ್ ಇಬ್ಬರು ಬಾಲ್ಯದ ಗೆಳೆಯರು. 6ನೇ ತರಗತಿಯಲ್ಲಿ ಪರಿಚಯವಾದ ಇಬ್ಬರು ಈಗ ಪತಿ-ಪತ್ನಿಯಾಗಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm