ಬ್ರೇಕಿಂಗ್ ನ್ಯೂಸ್
25-01-21 04:01 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿತು.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೇವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ ಎನ್ನಲಾಗುತ್ತಿದೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕಳೆದ ಎರಡು ಮೂರು ದಿನಗಳಿಂದ ವರುಣ್ ಮತ್ತು ನತಾಶಾ ಮದುವೆ ಶಾಸ್ತ್ರಗಳು ಜೋರಾಗಿ ನಡೆಯುತ್ತಿದೆ. ಆದರೆ ಯಾವುದೇ ಫೋಟೋಗಳು ಮತ್ತು ವಿಡಿಯೋವನ್ನು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಂಡಿದ್ದರು. ನಿನ್ನ ಭಾನುವಾರ ಮದುವೆ ದಿನ ವರುಣ್ ಮತ್ತು ನತಾಶಾ ಜೋಡಿ ಕ್ಯಾಮರಾ ಮುಂದೆ ಹಾಜರಾಗಿದ್ದರು. ಅಲ್ಲದೆ ವರುಣ್ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ, 'ಜೀವನ ಪರ್ಯಂತ ಪ್ರೀತಿಯು ಅಧಿಕೃತವಾಯಿತು' ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ಗಣ್ಯರು ವಿಶ್
ಈ ಸುಂದರ ಜೋಡಿಗೆ, ದೀಪಿಕಾ ಪಡುಕೋಣೆ, ಪರಿಣೀತಿ ಚೋಪ್ರಾ, ನೇಹಾ ದೂಪಿಯಾ, ಶಾಹಿದ್ ಕಪೂರ್, ಕರಿಶ್ಮಾ ಕಪೂರ್ ಸೇರಿದಂತೆ ಬಾಲಿವುಡ್ ಅನೇಕ ಗಣ್ಯರು ಸಾಮಾಜಿಕ ಜಾಲತಾಣದ ವಿಶ್ ಮಾಡತ್ತಿದ್ದಾರೆ.

ಬಳಿ ಬಣ್ಣದ ಉಡುಪಿನಲ್ಲಿ ನವ ಜೋಡಿ ಮಿಂಚಿಂಗ್
ನಟ ವರುಣ್ ಧವನ್ ನೀಲಿ ಮತ್ತು ಬಿಳಿ ಬಣ್ಣದ ಶೇರ್ವಾನಿ ಧರಿಸಿದ್ದರು. ವರುಣ್ ಪತ್ನಿ ನತಾಶಾ ಬಳಿ ಬಣ್ಣದ ಹೆಚ್ಚು ಎಂಬ್ರಾಯಿಡರಿ ವರ್ಕ್ ಇರುವ ಲೆಹೆಂಗಾದಲ್ಲಿ ಕಂಗೊಳಿಸುತ್ತಿದ್ದರು. ಮೂರ್ನಾಲ್ಕು ದಿನಗಳ ಮುಂಚಿತವಾಗಿಯೆ ವರುಣ್ ಮತ್ತು ನತಾಶಾ ಕುಟುಂಬ ಅಲಿಬಾಗ್ ಗೆ ತೆರಳಿದ್ದರು.

ನತಾಶಾ ದಲಾಲ್ ಯಾರು?
ನತಾಶಾ ದಲಾಲ್ ಖ್ಯಾತ ಉದ್ಯಮಿ ರಾಜೇಶ್ ದಲಾಲ್ ಪುತ್ರಿ. ನತಾಶಾ ತಾಯಿ ಗೌರಿ ದಲಾಲ್, ಅವರೂ ಸಹ ಉದ್ಯಮಿ. ನತಾಶಾ ಅವರದ್ದು ಉದ್ಯಮಿಗಳ ಕುಟುಂಬ. ನತಾಶಾ ಸಹ ಸ್ವಂತ ಫ್ಯಾಷನ್ ಬ್ರ್ಯಾಂಡ್ ಅನ್ನು ಹೊಂದಿದ್ದಾರೆ. ಅದರ ಹೆಸರು 'ನತಾಶಾ ದಲಾಲ್ ಲೇಬಲ್'. ನತಾಶಾ ಮತ್ತು ವರುಣ್ ಇಬ್ಬರು ಬಾಲ್ಯದ ಗೆಳೆಯರು. 6ನೇ ತರಗತಿಯಲ್ಲಿ ಪರಿಚಯವಾದ ಇಬ್ಬರು ಈಗ ಪತಿ-ಪತ್ನಿಯಾಗಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm