ಬ್ರೇಕಿಂಗ್ ನ್ಯೂಸ್
26-01-21 04:32 pm Source: FILMIBEAT Bharath Kumar K ಸಿನಿಮಾ
ಭಾರತೀಯ ಸಂಗೀತ ಕ್ಷೇತ್ರಕ್ಕೆ ಕೆಎಸ್ ಚಿತ್ರಾ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ಪದ್ಮ ಭೂಷಣ ಪ್ರಶಸ್ತಿ ಘೋಷಿಸಿ ಗೌರವಿಸಿದೆ. ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಿದರೆ, ಕೆಎಸ್ ಚಿತ್ರಾ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ವಿಶೇಷ ಅಂದ್ರೆ ಎಸ್ಪಿ ಬಾಲಸುಬ್ರಹ್ಮಣ್ಯಂ ಮತ್ತು ಕೆಎಸ್ ಚಿತ್ರಾ ಅವರು ಅನೇಕ ಹಾಡುಗಳಿಗೆ ಒಟ್ಟಿಗೆ ದನಿಗೂಡಿಸಿದ್ದಾರೆ. ಈ ಇಬ್ಬರಿಗೂ 72ನೇ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ಭಾರತದ ಅತ್ಯುನ್ನತ ಗೌರವ ನೀಡಲಾಗಿದೆ.
ಕೆಎಸ್ ಚಿತ್ರ ಅವರು ಮೂಲತಃ ಸಂಗೀತ ಕುಟುಂಬದಿಂದ ಬಂದವರು. ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದುಕೊಂಡಿದ್ದಾರೆ. 1979ರಲ್ಲಿ ಹಿನ್ನೆಲೆ ಗಾಯಕಿಯಾಗಿ ವೃತ್ತಿ ಆರಂಭಿಸಿದ ಚಿತ್ರ ಸುಮಾರು ನಾಲ್ಕು ದಶಕಗಳವರೆಗೂ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ.
ಕೆಎಸ್ ಚಿತ್ರ ಅವರು ಇದುವರೆಗೂ ತಮಿಳು, ತೆಲುಗು, ಕನ್ನಡ, ಮಲಯಾಳಂ, ಹಿಂದಿ, ಬೆಂಗಾಳಿ, ತುಳು ಸೇರಿದಂತೆ ಇತರೆ ಪ್ರಮುಖ ಭಾಷೆಗಳಲ್ಲಿ ಸೇರಿ ಸುಮಾರು 25000 ಹಾಡುಗಳನ್ನು ಹಾಡಿದ್ದಾರೆ. ಮಲಯ್, ಲ್ಯಾಟಿನ್, ಅರೇಬಿಕ್, ಸಿಂಹಳೀಯ, ಇಂಗ್ಲಿಷ್ ಮತ್ತು ಫ್ರೆಂಚ್ ಮುಂತಾದ ವಿದೇಶಿ ಭಾಷೆಗಳಲ್ಲೂ ಚಿತ್ರ ಹಾಡಿದ್ದಾರೆ. ತಮ್ಮ ಅದ್ಭುತ ಗಾಯನಕ್ಕಾಗಿ ಇದುವರೆಗೂ ಏಂಟು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದು ಯಾವ ಮಹಿಳಾ ಗಾಯಕಿಯೂ ಮಾಡಿರದ ಸಾಧನೆ.
ಕೆಎಸ್ ಚಿತ್ರ ಅವರನ್ನು ಉತ್ತರ ಭಾರತದ ಪಿಯಾ ಬಸಂತಿ ಎಂದು, ಆಂಧ್ರಪ್ರದೇಶದ ಮತ್ತು ತೆಲಂಗಾಣದಲ್ಲಿ ಸಂಗೀತ ಸರಸ್ವತಿ ಎಂದು ಹಾಗೂ ತಮಿಳಿನಲ್ಲಿ ಚಿನ್ನಾ ಕುಯಿಲ್ ಎಂದು ಕರೆಯುತ್ತಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm