ಬ್ರೇಕಿಂಗ್ ನ್ಯೂಸ್
26-01-21 04:38 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿದೆ.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಬಾಲಿವುಡ್ ಗಣ್ಯರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟ ವರುಣ್ ಧವನ್ ಬಗ್ಗೆ ಮಾಡಿರುವ ಶಾಕಿಂಗ್ ಕಾಮೆಂಟ್ ಎಲ್ಲರ ಗಮನ ಸೆಳೆಯುತ್ತಿದೆ.
ವರುಣ್ ಧವನ್ ದಂಪತಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಶ್ರದ್ಧಾ ವ್ಯಂಗ್ಯವಾಡಿದ್ದಾರೆ. ಇನ್ಸ್ಟಾ ಗ್ರಾಮ್ ನಲ್ಲಿ ಬರೆದುಕೊಂಡಿರುವ ಶ್ರದ್ಧಾ 'ಇನ್ನೊಬ್ಬ ಉತ್ತಮ ನಟನ ವೃತ್ತಿ ಬದುಕು ಕೊನೆಯಾಯಿತು. ನಾವು ಮತ್ತೆ ಅವರನ್ನು ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎನ್ನುವ ಬೇಸರವಿದೆ. ಅವರ ಪತ್ನಿ ಮತ್ತು ಅತ್ತೆ ಮನೆಯರು ಬೇರೆ ನಾಯಕಿಯರ ಜೊತೆ ನಟಿಸುವದನ್ನು ಇಷ್ಟಪಡುವುದಿಲ್ಲ' ಎಂದಿದ್ದಾರೆ.
ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತಾರಾ?
'ಬಹುಶಃ ಅವರು ಇನ್ಮುಂದೆ ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡಲು ಬದಲಾಗುತ್ತಾರೆಯೇ? ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನವನ್ನು ಹೇಗೆ ನಿಭಾಯಿಸಿಕೊಂಡು ಹೋಗುತ್ತಾರೆ. ತುಂಬಾ ಕಷ್ಟ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಭಿನಂದನೆಗಳು ವರುಣ್ ಧವನ್' ಎಂದು ವ್ಯಂಗ್ಯ ವಾಡಿದ್ದಾರೆ.
ಪುರುಷ ಪ್ರಧಾನ ವ್ಯಸ್ಥೆಯನ್ನು ಅಣಕಿಸಿದ ಶ್ರದ್ಧಾ
ಮದುವೆಯ ಬಳಿಕ ನಟಿಮಣಿಯರಿಗೆ ಎದುರಾಗುವ ಪ್ರಶ್ನೆಗಳನ್ನು ವರುಣ್ ಧವನ್ ಗೆ ಹೇಳುವ ಮೂಲಕ ಪುರುಷ ಪ್ರಧಾನ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ನಟಿಯರು ಮದುವೆಯಾದ ಬಳಿಕ ವೃತ್ತಿ ಜೀವನ ಕೊನೆೆಯಾಯಿತು, ಗಂಡನ ಮನೆಯವರ ಅನುಮತಿ ಪಡೆಯಬೇಕು ಎನ್ನುವ ಮಾತುಗಳು ಬರುತ್ತಿವೆ. ಹಾಗಾಗಿ ವರುಣ್ ಧವನ್ ಮದುವೆಯನ್ನು ಶ್ರದ್ಧಾ ವ್ಯಂಗ್ಯವಾಡಿದ್ದಾರೆ.
This News Article is a Copy of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm