ಬ್ರೇಕಿಂಗ್ ನ್ಯೂಸ್
26-01-21 04:38 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ ನಟ ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ಭಾನುವಾರ (ಜನವರಿ 24) ಹಸೆಮಣೆ ಏರಿದ್ದಾರೆ. ವರುಣ್ ಮದುವೆ ಮಹಾರಾಷ್ಟ್ರದ ಅಲಿಬಾಗ್ ನಲ್ಲಿರುವ ಐಷಾರಾಮಿ ಹೋಟೆಲ್ ದಿ ಮ್ಯಾನ್ಷನ್ ಹೌಸ್ ನಲ್ಲಿ ನೆರವೇರಿದೆ.
ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇವಲ 150 ರಿಂದ 200 ಮಂದಿ ಮಾತ್ರ ಮದುವೆಯಲ್ಲಿ ಹಾಜರಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ವರುಣ್ ಮತ್ತು ನತಾಶಾ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಬಾಲಿವುಡ್ ಗಣ್ಯರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ನಟ ವರುಣ್ ಧವನ್ ಬಗ್ಗೆ ಮಾಡಿರುವ ಶಾಕಿಂಗ್ ಕಾಮೆಂಟ್ ಎಲ್ಲರ ಗಮನ ಸೆಳೆಯುತ್ತಿದೆ.

ವರುಣ್ ಧವನ್ ದಂಪತಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಶ್ರದ್ಧಾ ವ್ಯಂಗ್ಯವಾಡಿದ್ದಾರೆ. ಇನ್ಸ್ಟಾ ಗ್ರಾಮ್ ನಲ್ಲಿ ಬರೆದುಕೊಂಡಿರುವ ಶ್ರದ್ಧಾ 'ಇನ್ನೊಬ್ಬ ಉತ್ತಮ ನಟನ ವೃತ್ತಿ ಬದುಕು ಕೊನೆಯಾಯಿತು. ನಾವು ಮತ್ತೆ ಅವರನ್ನು ಪರದೆ ಮೇಲೆ ನೋಡಲು ಸಾಧ್ಯವಿಲ್ಲ ಎನ್ನುವ ಬೇಸರವಿದೆ. ಅವರ ಪತ್ನಿ ಮತ್ತು ಅತ್ತೆ ಮನೆಯರು ಬೇರೆ ನಾಯಕಿಯರ ಜೊತೆ ನಟಿಸುವದನ್ನು ಇಷ್ಟಪಡುವುದಿಲ್ಲ' ಎಂದಿದ್ದಾರೆ.

ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತಾರಾ?
'ಬಹುಶಃ ಅವರು ಇನ್ಮುಂದೆ ಪುರುಷ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡಲು ಬದಲಾಗುತ್ತಾರೆಯೇ? ಅವರ ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನವನ್ನು ಹೇಗೆ ನಿಭಾಯಿಸಿಕೊಂಡು ಹೋಗುತ್ತಾರೆ. ತುಂಬಾ ಕಷ್ಟ. ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಭಿನಂದನೆಗಳು ವರುಣ್ ಧವನ್' ಎಂದು ವ್ಯಂಗ್ಯ ವಾಡಿದ್ದಾರೆ.

ಪುರುಷ ಪ್ರಧಾನ ವ್ಯಸ್ಥೆಯನ್ನು ಅಣಕಿಸಿದ ಶ್ರದ್ಧಾ
ಮದುವೆಯ ಬಳಿಕ ನಟಿಮಣಿಯರಿಗೆ ಎದುರಾಗುವ ಪ್ರಶ್ನೆಗಳನ್ನು ವರುಣ್ ಧವನ್ ಗೆ ಹೇಳುವ ಮೂಲಕ ಪುರುಷ ಪ್ರಧಾನ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ನಟಿಯರು ಮದುವೆಯಾದ ಬಳಿಕ ವೃತ್ತಿ ಜೀವನ ಕೊನೆೆಯಾಯಿತು, ಗಂಡನ ಮನೆಯವರ ಅನುಮತಿ ಪಡೆಯಬೇಕು ಎನ್ನುವ ಮಾತುಗಳು ಬರುತ್ತಿವೆ. ಹಾಗಾಗಿ ವರುಣ್ ಧವನ್ ಮದುವೆಯನ್ನು ಶ್ರದ್ಧಾ ವ್ಯಂಗ್ಯವಾಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm