ಬ್ರೇಕಿಂಗ್ ನ್ಯೂಸ್
26-01-21 04:44 pm Source: FILMIBEAT Shruthi Gk ಸಿನಿಮಾ
ಇಂದು ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಈ ಬಾರಿಯ ಗಣರಾಜ್ಯದಿನವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ. ಧನಂಜಯ್ ಸದ್ಯ ರತ್ನನ್ ಪ್ರಪಂಚ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರತ್ನನ್ ಪ್ರಪಂಚ ಸಿನಿಮಾದ ಚಿತ್ರೀಕರಣ ಹಳ್ಳಿಯಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆಯೂ ಧನಂಜಯ್ ಹಳ್ಳಿಯ ಶಾಲೆಯೊಂದರ ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದಾರೆ.
ಈ ಸಮಯದಲ್ಲಿ ಮಕ್ಕಳ ಮುಂದೆ ಭಾಷಣ ಮಾಡಿದ ನಟ ಧನಂಜಯ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂವಿಧಾನ ಎಂದರೇನು? ಅಂತ ಸರಳವಾಗಿ ವಿವರಿಸಿದ ಧನಂಜಯ್ ಮಾತಿಗೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.
ಗಣರಾಜ್ಯ ಎಂದರೇನು? ಧನಂಜಯ್ ಹೇಳ್ತಾರೆ ಕೇಳಿ
'ನಿಮ್ಮ ಜೊತೆ ಗಣರಾಜ್ಯ ದಿವಸ ಆಚರಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಗಣರಾಜ್ಯ ಎಂದರೆ ತುಂಬಾ ಸರಳವಾಗಿ ಹೇಳಬೇಕು ಎಂದರೆ ಶಾಲೆ ನಡೆಸಲು ಒಂದು ರೀತಿ ನೀತಿ ಇರತ್ತೆ, ಎಲ್ಲರೂ ಒಂದೇ, ಎಲ್ಲರಿಗೂ ಸಮಾನ ಅವಕಾಶವಿದೆ. ದೇಶ ನಡೆಸಲು ಒಂದು ರೀತಿ ನೀತಿ ಇರಬೇಕಲ್ವಾ.' ಎಂದಿದ್ದಾರೆ.

ಅಂಬೇಡ್ಕರ್ ಮತ್ತು ಹಿರಿಯರು ಸೇರಿ ರಚಿಸಿದ ಗ್ರಂಥ
'ಅಂಬೇಡ್ಕರ್ ಅಂತ ಹಿರಿಯರು ಎಲ್ಲಾ ಸೇರಿ ದೇಶ ನಡೆಸಲು ಅದ್ಭುತವಾದ ಗ್ರಂಥ ಸಂವಿಧಾನವನ್ನು ರಚಿಸಿದ್ದಾರೆ. ಇದೇ ದೇಶದಲ್ಲಿ ಎಲ್ಲವನ್ನೂ ನೋಡಿ ಬೆಳೆದವರು ಅವರು, ಹಾಗಾಗಿ ಈ ದೇಶ ಅದ್ಭುತವಾಗಿ ನಡೆಸಬೇಕು ಎಂದು ರಚಿಸಿದ್ದಾರೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರಬೇಕು.'
ಪ್ರಜಾಪ್ರಭುತ್ವ ಎಂದರೇನು?
'ಪ್ರಜಾಪ್ರಭುತ್ವ ಎಂದರೆ ಎಲ್ಲರಿಗೂ ಗೊತ್ತಿದೆ. ಇನ್ನು ಸ್ವಲ್ಪ ವರ್ಷದಲ್ಲೇ ನೀವು ಓಟು ಮಾಡುತ್ತೀರಿ. ಆಗ ನಿಮಗೆ ಗೊತ್ತಿರಬೇಕು. ಪ್ರಜಾಪ್ರಭುತ್ವ ಎಂದರೇ ಏನು ಅಂತ. ಪ್ರಜೆ ಎಂದರೆ ಪ್ರಜೆಗಳು ಎಂದರೆ ನಾವು. ಪ್ರಭುತ್ವ ಎಂದರೆ ಆಳ್ವಿಕೆ. ನಾವು ಆಳಬೇಕು ಅಂದರೆ ಅಧಿಕಾರವನ್ನು ಕೊಡುವ ಮೂಲಕ. ನಾವು ಓಟು ಹಾಕುವ ಮೂಲಕ ಅಧಿಕಾರ ಕೊಡುತ್ತೀವಿ. ಆದರೀಗ ಅಧಿಕಾರ ತಗೊತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm