ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm