ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm