ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.
ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm