ಬ್ರೇಕಿಂಗ್ ನ್ಯೂಸ್
27-01-21 02:37 pm Source: FILMIBEAT Shruthi Gk ಸಿನಿಮಾ
ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇತ್ತೀಚಿಗೆ ವಿಶೇಷ ಅಭಿಮಾನಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಭಿಮಾನಿಗಳೇ ದೇವರೆಂದು ಆರಾಧಿಸುವ ಅಪ್ಪು ಅವರು ಕಷ್ಟದಲ್ಲಿದ್ದಾರೆ ಎಂದು ಗೊತ್ತಾದರೆ ಸಾಕು ಸಹಾಯಕ್ಕೆ ನಿಲ್ಲುತ್ತಾರೆ. ಇತ್ತೀಚಿಗೆ ಪವರ್ ಸ್ಟಾರ್ ಅಪ್ಪಟ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಅವರ ಆಸೆ ಈಡೇರಿಸಿದ್ದಾರೆ. ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯ ದೇವಿಪ್ರಿಯಾ ಎನ್ನುವ ಬಾಲಕಿಗೆ ಅಪ್ಪು ಎಂದರೆ ತುಂಬಾ ಪ್ರೀತಿ.
ಆದರೆ ಆ ದೇವರು ಎಲ್ಲಾ ಮಕ್ಕಳಂತೆ ಕುಣಿಯುವ, ಓಡುವ, ಹಾರಾಡುತ್ತಾ ಜೀವಿಸುವ ಬದುಕನ್ನು ಕಿತ್ತುಕೊಂಡಿದ್ದಾನೆ. ಸುಮಾರು ಎರಡು ವರ್ಷಗಳಿಂದ ದೇವಿಪ್ರಿಯಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಪುಟ್ಟ ಬಾಲಕಿ ಪ್ರತಿನಿತ್ಯ ಪವರ್ ಸ್ಟಾರ್ ನೋಡದೆ ಊಟ ಸಹ ಮಾಡುವುದಲ್ಲವಂತೆ.

ಜೀವನದಲ್ಲಿ ಒಮ್ಮೆಯಾದರೂ ಅಪ್ಪು ಭೇಟಿಯಾಗಬೇಕು, ಮಾತನಾಡಿಸಬೇಕು ಎನ್ನುವುದು ಆ ಬಾಲಕಿಯ ಆಸೆ. ಈ ಬಗ್ಗೆ ವಿಷಯ ತಿಳಿದುಕೊಂಡ ಪವರ್ ಸ್ಟಾರ್ ಪುಟ್ಟ ಬಾಲಕಿಯನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಕೆಲ ಸಮಯ ಮಾತನಾಡಿ ಧೈರ್ಯ ತುಂಬಿದ್ದಾರೆ. ಪವರ್ ಸ್ಟಾರ್ ಭೇಟಿಯಿಂದ ದೇವಿಪ್ರಿಯಾ ಫುಲ್ ಖುಷ್ ಆಗಿದ್ದಾರೆ. ಅವರ ಕುಟುಂಬದವರು ಸಹ ಅಪ್ಪು ನೋಡಿ ಸಂತಸ ಪಟ್ಟಿದ್ದಾರೆ. ಪುನೀತ್ ದೇವಿಪ್ರಿಯಾ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪ್ಪು ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪುನೀತ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜೇಮ್ಸ್ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇನ್ನು ಪುನೀತ್ ನಟನೆಯ ಯುವರತ್ನ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ 1ರಂದು ತೆರೆಗೆ ಬರುತ್ತಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm