ಬ್ರೇಕಿಂಗ್ ನ್ಯೂಸ್
27-01-21 02:50 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ '777 ಚಾರ್ಲಿ' ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಸಿನಿಮಾತಂಡ ಇದೀಗ ಕೊನೆಯ ಹಂತದ ಚಿತ್ರೀಕರವನ್ನು ಯಶಸ್ಸಿಯಾಗಿ ಮಾಡಿ ಮುಗಿಸಿದ್ದಾರೆ.
777 ಚಾರ್ಲಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ಕಾಶ್ಮೀರ ಕಡೆ ಪಯಣ ಬೆಳೆಸಿದ್ದ ಸಿನಿಮಾತಂಡ ಇದೀಗ ಚಿತ್ರೀಕರಣ ಮುಕ್ತಾಯವಾಗಿರುವ ಸಂತಸದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
777 ಚಾರ್ಲಿ ಚಿತ್ರದ ಕಾಶ್ಮೀರ ಭಾಗದ ಅಂತಿಮ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ' ಎಂದು ಚಾರ್ಲಿತಂಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ. ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರದ ಪ್ಯಾಚ್ ವರ್ಕ್ ಕೆಲಸವಿದ್ದು, ಬೆಂಗಳೂರಿನಲ್ಲಿ ಪ್ಯಾಚ್ ವರ್ಕ್ ಕೆಲಸ ಮುಗಿಸಿದರೆ ಚಾರ್ಲಿ ಚಿತ್ರೀಕರಣ ಸಂಪೂರ್ಣವಾಗಿ ಮುಗಿಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇನ್ನು ನಟ ರಕ್ಷಿತ್ ಶೆಟ್ಟಿ ಈ ಬಗ್ಗೆ ಟ್ವೀಟ್ ಮಾಡಿ, ಕಾಶ್ಮೀರದ ತುಂಬಾ ಶೀತ ವಾತಾವರಣದ ನಡುವೆಯೂ ಚಿತ್ರೀಕರಣ ಮಾಡಿದ್ದೇವೆ. ಇದು ಎಲ್ಲಕ್ಕಿಂತ ಕಷ್ಟಕರವಾದ ಹಂತವಾಗಿತ್ತು. ಆದರೆ ನಾವು ಅದ್ಭುತವಾಗಿ ಚಿತ್ರೀಕರಣ ಮಾಡಿದ್ದೇವೆ. ಇನ್ನು 6 ದಿನಗಳ ಪ್ಯಾಚ್ ವರ್ಕ್ ಬೆಂಗಳೂರಿನಲ್ಲಿದೆ.' ಎಂದು ಬರೆದುಕೊಂಡಿದ್ದಾರೆ. ಈಗಾಗಲೇ 777 ಚಾರ್ಲಿ ಸಿನಿಮಾದ ಮೊದಲ ಭಾಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದೆ. ಡಬ್ಬಿಂಗ್ ಸಹ ಮುಕ್ತಾಯವಾಗಿದೆ. ಲಾಕ್ ಡೌನ್ ಬಳಿಕ ಪ್ರಾರಂಭವಾದ ಚಿತ್ರೀಕರಣದ ಡಬ್ಬಿಂಗ್ ಭಾಗ ಬಾಕಿ ಇದೆ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಅಂದಹಾಗೆ '777 ಚಾರ್ಲಿ' ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ ಇರುವ ಸಿನಿಮಾವಾಗಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ '777 ಚಾರ್ಲಿ' ಜೂನ್ ಅಥವಾ ಜುಲೈನಲ್ಲಿ ತೆರೆಗ ಬರುವ ಸಾಧ್ಯತೆ ಇದೆ. ರಕ್ಷಿತ್ ಶೆಟ್ಟಿ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ಬಳಿಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm