ಬ್ರೇಕಿಂಗ್ ನ್ಯೂಸ್
28-01-21 12:33 pm Source: FILMIBEAT Murulidhara ಸಿನಿಮಾ
ಬೆಂಗಳೂರು, ಜನವರಿ 28: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ಸಿಸಿಬಿ ಬುಲಾವ್ ನೀಡಿದೆ. ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಮುಂದೆ ಹಾಜರಾಗಲು ಸೂಚಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಪೊಲೀಸ್ ಅಯುಕ್ತರ ಕಚೇರಿಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಎರಡು ಬಾರಿ ಸಿಸಿಬಿ ಪೊಲೀಸರ ಕಚೇರಿಗೆ ಭೇಟಿ ನೀಡಿ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಇಂಧ್ರಜಿತ್ ಲಂಕೇಶ್ ಮಾಹಿತಿ ನೀಡಿದ್ದರು. 2020 ಅಗಸ್ಟ್ 21 ಹಾಗೂ ಸೆಪ್ಟಂಬರ್ 2 ರಂದು ಎರಡು ಬಾರಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದರು. ಡ್ರಗ್ ಪಾರ್ಟಿಯ ಚಿತ್ರಗಳಿದ್ದ ಪೆನ್ ಡ್ರೈವ್ ಸಿಸಿಬಿ ಪೊಲೀಸರಿಗೆ ನೀಡಿದ್ದರು. ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ನೀಡಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಹಳೇ ಪ್ರಕರಣ ಮರು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಆರ್ ಟಿಓ ಅಧಕಾರಿ ರವಿಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ ನಟಿ ಐಂದ್ರಿತಾ ರೈ, ದಿಗಂತ್, ರಾಗಿಣಿ, ಸಂಜನಾ ಗಲ್ರಾಣಿ ಸೇರಿದಂತೆ ಸ್ಯಾಂಡಲ್ ವುಡ್ ನಟ- ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ನಟಿ ಸಂಜನಾ , ರಾಗಿಣಿ ಬಂಧನಕ್ಕೆ ಒಳಗಾಗಿದ್ದರು. ಆದಿತ್ವ ಆಳ್ವಾ ಕೂಡ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ. ಇನ್ನು ಡ್ರಗ್ ಡೀಲಿಂಗ್ ಕಿಂಗ್ ಪಿನ್ ಗಳಾದ ವೀರೇನ್ ಖನ್ನಾ, ರಾಹುಲ್ ತೋನ್ಸೆ, ಶಿವಪ್ರಕಾಶ್ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಅವರ ಮುಂದೆ ಇಂದ್ರಜಿತ್ ಹಾಜರಾಗಲಿದ್ದು, ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿಬಿ ಪೊಲೀಸರು ವಿಚಾರಣೆಗೆ ಬರುವಂತೆ ಕರೆದಿರುವುದು ನಿಜ. ನಾನು ಸಿಸಿಬಿ ಡಿಸಿಪಿ ಯವರನ್ನು ಭೇಟಿ ಮಾಡಲಿದ್ದೇನೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ ಬಳಿಕವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm