ಬ್ರೇಕಿಂಗ್ ನ್ಯೂಸ್
28-01-21 12:33 pm Source: FILMIBEAT Murulidhara ಸಿನಿಮಾ
ಬೆಂಗಳೂರು, ಜನವರಿ 28: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ಸಿಸಿಬಿ ಬುಲಾವ್ ನೀಡಿದೆ. ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಮುಂದೆ ಹಾಜರಾಗಲು ಸೂಚಿಸಿದ್ದು, ಗುರುವಾರ ಬೆಳಗ್ಗೆ 11 ಗಂಟೆಗೆ ಇಂದ್ರಜಿತ್ ಪೊಲೀಸ್ ಅಯುಕ್ತರ ಕಚೇರಿಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.
ಈ ಹಿಂದೆ ಎರಡು ಬಾರಿ ಸಿಸಿಬಿ ಪೊಲೀಸರ ಕಚೇರಿಗೆ ಭೇಟಿ ನೀಡಿ ಸ್ಯಾಂಡಲ್ ವುಡ್ ಡ್ರಗ್ ಜಾಲದ ಬಗ್ಗೆ ಇಂಧ್ರಜಿತ್ ಲಂಕೇಶ್ ಮಾಹಿತಿ ನೀಡಿದ್ದರು. 2020 ಅಗಸ್ಟ್ 21 ಹಾಗೂ ಸೆಪ್ಟಂಬರ್ 2 ರಂದು ಎರಡು ಬಾರಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದರು. ಡ್ರಗ್ ಪಾರ್ಟಿಯ ಚಿತ್ರಗಳಿದ್ದ ಪೆನ್ ಡ್ರೈವ್ ಸಿಸಿಬಿ ಪೊಲೀಸರಿಗೆ ನೀಡಿದ್ದರು. ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ನೀಡಿದ್ದ ಮಾಹಿತಿ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಈ ಹಿನ್ನೆಲೆಯಲ್ಲಿ ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಹಳೇ ಪ್ರಕರಣ ಮರು ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಆರ್ ಟಿಓ ಅಧಕಾರಿ ರವಿಶಂಕರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ ನಟಿ ಐಂದ್ರಿತಾ ರೈ, ದಿಗಂತ್, ರಾಗಿಣಿ, ಸಂಜನಾ ಗಲ್ರಾಣಿ ಸೇರಿದಂತೆ ಸ್ಯಾಂಡಲ್ ವುಡ್ ನಟ- ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.
ನಟಿ ಸಂಜನಾ , ರಾಗಿಣಿ ಬಂಧನಕ್ಕೆ ಒಳಗಾಗಿದ್ದರು. ಆದಿತ್ವ ಆಳ್ವಾ ಕೂಡ ಇತ್ತೀಚೆಗೆ ಬಂಧನಕ್ಕೆ ಒಳಗಾಗಿದ್ದ. ಇನ್ನು ಡ್ರಗ್ ಡೀಲಿಂಗ್ ಕಿಂಗ್ ಪಿನ್ ಗಳಾದ ವೀರೇನ್ ಖನ್ನಾ, ರಾಹುಲ್ ತೋನ್ಸೆ, ಶಿವಪ್ರಕಾಶ್ ಸೇರಿದಂತೆ ಸ್ಯಾಂಡಲ್ ವುಡ್ ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಇಂದ್ರಜಿತ್ ಲಂಕೇಶ್ ಅವರಿಗೆ ಸಿಸಿಬಿ ಪೊಲೀಸರು ಬುಲಾವ್ ನೀಡಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸಿಸಿಬಿ ಡಿಸಿಪಿ ಬಸವರಾಜ ಅಂಗಡಿ ಅವರ ಮುಂದೆ ಇಂದ್ರಜಿತ್ ಹಾಜರಾಗಲಿದ್ದು, ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸಿಬಿ ಪೊಲೀಸರು ವಿಚಾರಣೆಗೆ ಬರುವಂತೆ ಕರೆದಿರುವುದು ನಿಜ. ನಾನು ಸಿಸಿಬಿ ಡಿಸಿಪಿ ಯವರನ್ನು ಭೇಟಿ ಮಾಡಲಿದ್ದೇನೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ ಬಳಿಕವಷ್ಟೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm