ಬ್ರೇಕಿಂಗ್ ನ್ಯೂಸ್
28-01-21 12:48 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಟ ವಿಜಯ್ ವಿರುದ್ಧ ಚಿತ್ರಮಂದಿರಗಳ ಮಾಲೀಕರು, ಸಿನಿಮಾ ವಿತರಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯ್ ನಟನೆಯ 'ಮಾಸ್ಟರ್' ಸಿನಿಮಾವನ್ನು ಜನವರಿ 29 ರಂದು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡುವ ನಿರ್ಧಾರ ಇಂದು ಪ್ರಕಟಿಸಿದ್ದು, ಇದೇ ಕಾರಣಕ್ಕೆ ಚಿತ್ರಮಂದಿರ ಮಾಲೀಕರು ವಿಜಯ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾ ನಡುವೆಯೂ 'ಮಾಸ್ಟರ್' ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ವಿಜಯ್ ರ ಈ ನಿರ್ಣಯಕ್ಕೆ ಚಿತ್ರಮಂದಿರ ಮಾಲೀಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಸಿನಿಮಾ ಬಿಡುಗಡೆ ಆಗಿ ಎರಡು ವಾರದಲ್ಲಿಯೇ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿರುವುದು ಚಿತ್ರಮಂದಿರ ಮಾಲೀಕರಿಗೆ ತೀವ್ರ ಬೇಸರ ತಂದಿದೆ.
'ಮಾಸ್ಟರ್' ಚಿತ್ರತಂಡದ ನಿರ್ಧಾರದ ಬಗ್ಗೆ ಬೇಸರ
'ಮಾಸ್ಟರ್' ಚಿತ್ರತಂಡದ ನಿರ್ಣಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ತಮಿಳುನಾಡು ಚಿತ್ರಮಂದಿರಗಳ ಮಾಲೀಕರ ಸಂಘದ ಅಧ್ಯಕ್ಷ ತಿರುಪೂರು ಸುಬ್ರಹ್ಮಣಿಯನ್, 'ನಾವು ಚಿತ್ರತಂಡವನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ' ಅವರೊಟ್ಟಿಗೆ ಮಾತನಾಡುತ್ತೇವೆ ಎಂದಿದ್ದಾರೆ.
ಚಿತ್ರಮಂದಿರಗಳಿಗೆ ಲಾಭ ಬರುವ ಮುಂಚೆಯೇ ಸಿನಿಮಾ ಮಾರಾಟ
ಸಾಮಾನ್ಯವಾಗಿ ಚಿತ್ರಮಂದಿರಗಳು ಲಾಭ ಮಾಡುವುದು ಮೂರನೇ ಅಥವಾ ನಾಲ್ಕನೇ ವಾರದ ಕಲೆಕ್ಷನ್ನಲ್ಲಿ. ಮೊದಲ ಎರಡು ವಾರದ ಕಲೆಕ್ಷನ್ ಚಿತ್ರ ನಿರ್ಮಾಪಕರಿಗೆ ಹೋಗುತ್ತದೆ. ಹೀಗಿದ್ದಾಗ ಎರಡೇ ವಾರಕ್ಕೆ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡಿದರೆ ನಾವು ಲಾಭ ಕಾಣುವುದು ಹೇಗೆ ಎಂದು ಚೆನ್ನೈನ ಜನಪ್ರಿಯ ವೆಟ್ರಿ ಚಿತ್ರಮಂದಿರ ಮಾಲೀಕ ರಾಕೇಶ್ ಹೇಳಿದ್ದಾರೆ.
ಬಿಡುಗಡೆ ಆದ 16 ದಿನಕ್ಕೆ ಸಿನಿಮಾ ಮಾರಾಟ
ಸಿನಿಮಾ ಬಿಡುಗಡೆ ಮಾಡಿದ 16 ದಿನಕ್ಕೆ ಅದನ್ನು ಒಟಿಟಿಗೆ ನೀಡುತ್ತೇವೆ ಎಂದು ಚಿತ್ರತಂಡ ನಮಗೆ ಮೊದಲೇ ಹೇಳಿದ್ದರೆ, ನಾವು ಚಿತ್ರ ನಿರ್ಮಾಪಕರೊಂದಿಗೆ ಅಥವಾ ವಿತರಕರೊಂದಿಗೆ ಬೇರೆ ರೀತಿಯ ಲಾಭ ಹಂಚಿಕೆ ಒಪ್ಪಂದ ಮಾಡಿಕೊಂಡಿರುತ್ತಿದ್ದೆವು, ಈ ಹಠಾತ್ ನಿರ್ಣಯ ಚಿತ್ರಮಂದಿರಗಳ ಮಾಲೀಕರಿಗೆ ಮಾಡಿದ ಮೋಸವಾಗಿದೆ ಎಂದಿದ್ದಾರೆ ರಾಕೇಶ್.
ಜನವರಿ 13 ಕ್ಕೆ ಬಿಡುಗಡೆ ಆಗಿದ್ದ ಸಿನಿಮಾ
ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಇದೇ ಜನವರಿ 13 ರಂದು ಬಿಡುಗಡೆ ಆಗಿತ್ತು. ಇದೇ 29 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಕೆಲವೇ ದಿನಗಳಲ್ಲಿ ಈ ಸಿನಿಮಾವು 200 ಕೋಟಿ ಹಣ ಗಳಿಸಿ ಇನ್ನೂ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿತ್ತು. ಈ ನಡುವೆಯೇ ಸಿನಿಮಾವನ್ನು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm