ಬ್ರೇಕಿಂಗ್ ನ್ಯೂಸ್
28-01-21 12:48 pm Source: FILMIBEAT Manjunatha C ಸಿನಿಮಾ
ತಮಿಳಿನ ಖ್ಯಾತ ನಟ ವಿಜಯ್ ವಿರುದ್ಧ ಚಿತ್ರಮಂದಿರಗಳ ಮಾಲೀಕರು, ಸಿನಿಮಾ ವಿತರಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿಜಯ್ ನಟನೆಯ 'ಮಾಸ್ಟರ್' ಸಿನಿಮಾವನ್ನು ಜನವರಿ 29 ರಂದು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡುವ ನಿರ್ಧಾರ ಇಂದು ಪ್ರಕಟಿಸಿದ್ದು, ಇದೇ ಕಾರಣಕ್ಕೆ ಚಿತ್ರಮಂದಿರ ಮಾಲೀಕರು ವಿಜಯ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರೊನಾ ನಡುವೆಯೂ 'ಮಾಸ್ಟರ್' ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ಬಿಡುಗಡೆ ಮಾಡಲಾಗಿತ್ತು. ವಿಜಯ್ ರ ಈ ನಿರ್ಣಯಕ್ಕೆ ಚಿತ್ರಮಂದಿರ ಮಾಲೀಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಸಿನಿಮಾ ಬಿಡುಗಡೆ ಆಗಿ ಎರಡು ವಾರದಲ್ಲಿಯೇ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುತ್ತಿರುವುದು ಚಿತ್ರಮಂದಿರ ಮಾಲೀಕರಿಗೆ ತೀವ್ರ ಬೇಸರ ತಂದಿದೆ.

'ಮಾಸ್ಟರ್' ಚಿತ್ರತಂಡದ ನಿರ್ಧಾರದ ಬಗ್ಗೆ ಬೇಸರ
'ಮಾಸ್ಟರ್' ಚಿತ್ರತಂಡದ ನಿರ್ಣಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ತಮಿಳುನಾಡು ಚಿತ್ರಮಂದಿರಗಳ ಮಾಲೀಕರ ಸಂಘದ ಅಧ್ಯಕ್ಷ ತಿರುಪೂರು ಸುಬ್ರಹ್ಮಣಿಯನ್, 'ನಾವು ಚಿತ್ರತಂಡವನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ' ಅವರೊಟ್ಟಿಗೆ ಮಾತನಾಡುತ್ತೇವೆ ಎಂದಿದ್ದಾರೆ.
ಚಿತ್ರಮಂದಿರಗಳಿಗೆ ಲಾಭ ಬರುವ ಮುಂಚೆಯೇ ಸಿನಿಮಾ ಮಾರಾಟ
ಸಾಮಾನ್ಯವಾಗಿ ಚಿತ್ರಮಂದಿರಗಳು ಲಾಭ ಮಾಡುವುದು ಮೂರನೇ ಅಥವಾ ನಾಲ್ಕನೇ ವಾರದ ಕಲೆಕ್ಷನ್ನಲ್ಲಿ. ಮೊದಲ ಎರಡು ವಾರದ ಕಲೆಕ್ಷನ್ ಚಿತ್ರ ನಿರ್ಮಾಪಕರಿಗೆ ಹೋಗುತ್ತದೆ. ಹೀಗಿದ್ದಾಗ ಎರಡೇ ವಾರಕ್ಕೆ ಸಿನಿಮಾವನ್ನು ಒಟಿಟಿಗೆ ಬಿಡುಗಡೆ ಮಾಡಿದರೆ ನಾವು ಲಾಭ ಕಾಣುವುದು ಹೇಗೆ ಎಂದು ಚೆನ್ನೈನ ಜನಪ್ರಿಯ ವೆಟ್ರಿ ಚಿತ್ರಮಂದಿರ ಮಾಲೀಕ ರಾಕೇಶ್ ಹೇಳಿದ್ದಾರೆ.

ಬಿಡುಗಡೆ ಆದ 16 ದಿನಕ್ಕೆ ಸಿನಿಮಾ ಮಾರಾಟ
ಸಿನಿಮಾ ಬಿಡುಗಡೆ ಮಾಡಿದ 16 ದಿನಕ್ಕೆ ಅದನ್ನು ಒಟಿಟಿಗೆ ನೀಡುತ್ತೇವೆ ಎಂದು ಚಿತ್ರತಂಡ ನಮಗೆ ಮೊದಲೇ ಹೇಳಿದ್ದರೆ, ನಾವು ಚಿತ್ರ ನಿರ್ಮಾಪಕರೊಂದಿಗೆ ಅಥವಾ ವಿತರಕರೊಂದಿಗೆ ಬೇರೆ ರೀತಿಯ ಲಾಭ ಹಂಚಿಕೆ ಒಪ್ಪಂದ ಮಾಡಿಕೊಂಡಿರುತ್ತಿದ್ದೆವು, ಈ ಹಠಾತ್ ನಿರ್ಣಯ ಚಿತ್ರಮಂದಿರಗಳ ಮಾಲೀಕರಿಗೆ ಮಾಡಿದ ಮೋಸವಾಗಿದೆ ಎಂದಿದ್ದಾರೆ ರಾಕೇಶ್.

ಜನವರಿ 13 ಕ್ಕೆ ಬಿಡುಗಡೆ ಆಗಿದ್ದ ಸಿನಿಮಾ
ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಇದೇ ಜನವರಿ 13 ರಂದು ಬಿಡುಗಡೆ ಆಗಿತ್ತು. ಇದೇ 29 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಕೆಲವೇ ದಿನಗಳಲ್ಲಿ ಈ ಸಿನಿಮಾವು 200 ಕೋಟಿ ಹಣ ಗಳಿಸಿ ಇನ್ನೂ ಚೆನ್ನಾಗಿಯೇ ಪ್ರದರ್ಶನ ಕಾಣುತ್ತಿತ್ತು. ಈ ನಡುವೆಯೇ ಸಿನಿಮಾವನ್ನು ಅಮೆಜಾನ್ ಪ್ರೈಂ ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm