ಬ್ರೇಕಿಂಗ್ ನ್ಯೂಸ್
30-01-21 02:08 pm Source: FILMIBEAT ಸಿನಿಮಾ
ಸುಶಾಂತ್ ಸಿಂಗ್ ಸಾವು, ಡ್ರಗ್ಸ್ ಮಾಫಿಯಾ, ಬಾಲಿವುಡ್ ನೆಪೋಟಿಸಂ, ಮುಂಬೈ ಮಹಾನಗರ ಪಾಲಿಕೆ, ಮುಂಬೈ ಸರ್ಕಾರ ಹೀಗೆ...ಕಳೆದ ಆರೇಳು ತಿಂಗಳಿಂದ ನಟಿ ಕಂಗನಾ ಸಿನಿಮಾ ಬಿಟ್ಟು ಇನ್ನಿತರ ವಿಚಾರಕ್ಕಾಗಿಯೇ ಸುದ್ದಿಯಲ್ಲಿದ್ದರು. ಕಂಗನಾ ಕೊನೆಗೂ ತಲೈವಿ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಯೋಪಿಕ್ನಲ್ಲಿ ಕಂಗನಾ ನಟಿಸಿದ್ದು, ಪುರಚ್ಚಿ ತಲೈವಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ, ಮತ್ತೊಂದು ರಾಜಕೀಯ ಥ್ರಿಲ್ಲರ್ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು, ಈ ಚಿತ್ರದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರಂತೆ.
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ
ಇನ್ನು ಹೆಸರಿಡದ ಚಿತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ. ಇದು ರಾಜಕೀಯ ಆಧರಿತ ಸಿನಿಮಾ ಆಗಿದೆ. ಈ ಚಿತ್ರದಲ್ಲಿ ಭಾರತದ ರಾಜಕೀಯ ರಂಗ ಕಂಡ ಹಲವರ ಪಾತ್ರ ಬರಲಿದೆ. ಅದರಲ್ಲಿ ಇಂದಿರಾ ಗಾಂಧಿ ಪಾತ್ರವೂ ಒಂದು. ಇಂದಿರಾ ಪಾತ್ರದಲ್ಲಿ ಕಂಗನಾ ಕಾಣಿಸಿಕೊಳ್ಳಲಿದ್ದಾರೆ.

ಬಯೋಪಿಕ್ ಅಲ್ಲ ಎಂದು ಸ್ಪಷ್ಟನೆ
ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಎಂದಾಕ್ಷಣ ಇದು ಬಯೋಪಿಕ್ ಚಿತ್ರವಾಗಿರಬಹುದಾ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ ಇದು ಬಯೋಪಿಕ್ ಅಲ್ಲ ಎಂದು ಸ್ವತಃ ಕಂಗನಾ ಸ್ಪಷ್ಟಪಡಿಸಿದ್ದಾರೆ. ಇದೊಂದು ಕಾಲಘಟ್ಟದ ಚಿತ್ರ. ಆ ಸಮಯದಲ್ಲಿ ಬರುವ ರಾಜಕಾರಣಿಗಳ ಪಾತ್ರ ಪ್ರಮುಖವಾಗಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬಹಳ ವರ್ಷದಿಂದಲೂ ಆಸೆ ಇತ್ತು
ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಬೇಕು ಎನ್ನುವುದು ಕಂಗನಾ ರಣಾವತ್ ಅವರಿಗೆ ಮೊದಲಿನಿಂದಲೂ ಆಸೆ ಇತ್ತು. ವೃತ್ತಿ ಜೀವನದ ಆರಂಭದಲ್ಲಿ ಇಂದಿರಾ ಗಾಂಧಿಯಂತೆ ಮೇಕಪ್ ಮಾಡಿ ಫೋಟೋಶೂಟ್ ಸಹ ಮಾಡಿಸಿದ್ದರು. ಆ ಫೋಟೋ ಈಗ ವೈರಲ್ ಆಗಿದೆ. ಒಂದಲ್ಲ ಒಂದು ದಿನ ಈ ಪಾತ್ರ ಮಾಡುತ್ತೇನೆ ಎಂದು ಮನಸ್ಸಿನಲ್ಲಿ ನಿರ್ಧರಿಸಿದ್ದರಂತೆ. ಈಗ, ಆ ಸಮಯ ಬಂದಿದೆ.

ಸಾಯಿ ಕಬೀರ್ ನಿರ್ದೇಶನ
ಸ್ಕ್ರಿಪ್ಟ್ ಕೆಲಸ ಕೊನೆಯ ಹಂತದಲ್ಲಿದೆ. ಈ ಚಿತ್ರವನ್ನು ಸಾಯಿ ಕಬೀರ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಕಂಗನಾ ನಟಿಸಿದ್ದ ರಿವಾಲ್ವರ್ ರಾಣಿ ಚಿತ್ರವನ್ನು ಕಬೀರ್ ನಿರ್ದೇಶಿಸಿದ್ದರು. ಇದೀಗ, ಹೊಸ ಪ್ರಾಜೆಕ್ಟ್ಗೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಸಹ ಹೇಳಲು ತಯಾರಿ ನಡೆಸಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm