ಬ್ರೇಕಿಂಗ್ ನ್ಯೂಸ್
 
            
                        01-02-21 12:30 pm Source: FILMIBEAT ಸಿನಿಮಾ
 
            ಇಂದಿನಿಂದ (ಫೆಬ್ರವರಿ 1) ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು. ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಶೇ.100 ಆಸನ ಭರ್ತಿಗೆ ಅವಕಾಶ ನೀಡಿತ್ತು. ಹೊಸ ಮಾರ್ಗಸೂಚಿ ಜಾರಿಗೊಳಿಸಿ, ಪೂರ್ಣ ಪ್ರಮಾಣದ ಚಿತ್ರಮಂದಿರಗಳನ್ನು ಓಪನ್ ಮಾಡಲು ಅನುಮತಿ ನೀಡಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಿನಿಮಾ ಪ್ರದರ್ಶನ ಮಾಡುವಂತೆ ತಿಳಿಸಿದೆ. ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ಹಿಂದೆ ಇದ್ದ ನಿಯಮಗಳು ಮುಂದುವರೆಯಲಿದೆ.
ಚಿತ್ರಮಂದಿರಗಳಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸೂಚಿಸಿದೆ.
ಸುಮಾರು 11 ತಿಂಗಳಿಂದ ಅಂದರೆ 2020 ಮಾರ್ಚ್ ನಲ್ಲಿ ಆದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕ್ಕಿದ್ದ ಚಿತ್ರಮಂದಿರಗಳ ಮಾಲಿಕರು ಇದೀಗ ಸಂತಸ ತಂದಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಚಿತ್ರಮಂದಿರಗಳನ್ನು ಓಪನ್ ಮಾಡಲು ಅವಕಾಶ ನೀಡಿತ್ತಾದರೂ, ಪೂರ್ಣ ಪ್ರಮಾಣದ ಆಸನ ಭರ್ತಿಗೆ ಅವಕಾಶವಿರಲಿಲ್ಲ.
ಜನವರಿಯಿಂದಾದರೂ ಪೂರ್ಣಪ್ರಮಾಣದ ಅವಕಾಶ ಸಿಗುತ್ತಾ ಎಂದು ಸಿನಿಮಾ ಮಂದಿ ಕಾಯುತ್ತಿದ್ದರು. ಆದಕೆ ಜನವರಿ ತಿಂಗಳು ಸಹ ನಿರಾಸೆ ಮೂಡಿಸಿತ್ತು. ಶೇ.50ರಷ್ಟು ಆಸನದಲ್ಲೇ ಅನೇಕ ಸಿನಿಮಾಗಳು ರಿಲೀಸ್ ಆಗಿದೆ. ಇತ್ತೀಚಿಗೆ ತಮಿಳುನಾಡು ಸರ್ಕಾರ ಪರ್ಣ ಪ್ರಮಾಣದ ಅವಕಾಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆ ಅವಕಾಶವನ್ನು ಹಿಂಪಡೆದಿತ್ತು.
ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾ ಮಾಸ್ಟರ್ ಶೇ. 50 ಆಸನದಲ್ಲೇ ರಿಲೀಸ್ ಆಗಿ, ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ. ಸದ್ಯ ಇವತ್ತಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಕುಳಿತು ಸಿನಿಮಾ ವೀಕ್ಷಿಸಬಹುದಾಗಿದ್ದು, ಈ ನಿರ್ಧಾರ ಸಿನಿಮಾಮಂದಿಗೆ ಸಂತಸ ತಂದಿದೆ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm