ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm