ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm