ಬ್ರೇಕಿಂಗ್ ನ್ಯೂಸ್
02-02-21 01:52 pm Source: FILMIBEAT Manjunatha C ಸಿನಿಮಾ
ಡಬ್ಬಿಂಗ್ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಸ್ಥ, ನಿರ್ಮಾಪಕ ಸಾ.ರಾ.ಗೋವಿಂದು. ಡಬ್ಬಿಂಗ್ ಹಾವಳಿ ವಿರುದ್ಧ ಅಸಮಾಧಾನಗೊಂಡ ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು ಇಂದು ಫಿಲಂ ಛೇಂಬರ್ಗೆ ಭೇಟಿ ನೀಡಿ ಸಾ.ರಾ.ಗೋವಿಂದು ಅವರೊಂದಿಗೆ ಚರ್ಚೆ ನಡೆದು, ಅವರಿಗೆ ಮನವಿ ಅರ್ಜಿಯೊಂದನ್ನು ನೀಡಿದರು.
ಈ ಸಂದರ್ಭದಲ್ಲಿ ಡಬ್ಬಿಂಗ್ ವಿರುದ್ಧ ತಾವು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಡಿರುವ ಹೋರಾಟದ ಬಗ್ಗೆ ಮಾತನಾಡಿದ ಸಾ.ರಾ.ಗೋವಿಂದು, 'ನ್ಯಾಯಾಲಯದ ಆದೇಶಗಳು ನಮ್ಮ ಕೈ ಕಟ್ಟಿಹಾಕಿವೆ' ಎಂದು ಅಸಮಾಧಾನ ಹೊರಹಾಕಿದರು.
ಈ ಹಿಂದೆ ಅನ್ಯ ಭಾಷೆಗಳ ಸಿನಿಮಾಗಳಿಗೆ ಇಂತಿಷ್ಟೇ ಚಿತ್ರಮಂದಿರವನ್ನು ಮಾತ್ರವೇ ನೀಡಬೇಕು ಎಂಬ ನಿಯಮ ಮಾಡಿಕೊಂಡಿದ್ದೆವು. ಆಗ 'ರಾ ಒನ್' ಎಂಬ ಸಿನಿಮಾ ಬಿಡುಗಡೆ ಆಯ್ತು. ಅವರಿಗೆ ನಿಯಮದಂತೆ ಕೆಲವು ಸಿನಿಮಾ ಮಂದಿರಗಳನ್ನು ನೀಡಿದೆವು, ಅವರು ನಮ್ಮ ವಿರುದ್ಧ ನ್ಯಾಯಾಲಯಕ್ಕೆ ಹೋಗಿ ಗೆದ್ದರು. ಅಂದಿನಿಂದ ಯಾವ ಭಾಷೆಯ ಸಿನಿಮಾ ಎಷ್ಟು ಚಿತ್ರಮಂದಿರಗಳಲ್ಲಿ ಬೇಕಾದರೂ ಬಿಡುಗಡೆ ಆಗಬಹುದು ಎಂಬಂತಾಗಿದೆ ಎಂದರು ಸಾ.ರಾ.ಗೋವಿಂದು. ಬಾಹುಬಲಿ ಸಿನಿಮಾವನ್ನು ರಾಜ್ಯದಲ್ಲಿ 200 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರು.
ಎದೆಗೆ ಗುಂಡು ಹೊಡೆದ ಅನುಭವವಾಯಿತು. ಆದರೆ ನ್ಯಾಯಾಲಯದ ಆದೇಶಗಳು ನಮ್ಮನ್ನು ಕಟ್ಟಿಹಾಕಿವೆ. ನಿಮ್ಮಂಥಹವರು ಆದರೂ ಇದರ ಬಗ್ಗೆ ಪ್ರತಿಭಟಿಸುತ್ತಿದ್ದೀರ, ನಿಮಗೆ ನನ್ನ ಗೌರವ ಇದ್ದೇ ಇರುತ್ತದೆ ಎಂದರು ಸಾ.ರಾ.ಗೋವಿಂದು.
'ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕರ್ನಾಕಟದಲ್ಲಿ ಕನ್ನಡದಲ್ಲಿ, ಆಂಧ್ರ, ತೆಲಂಗಾಣಗಳಲ್ಲಿ ತೆಲುಗಿನಲ್ಲಿ, ಕೇರಳದಲ್ಲಿ ಮಲಯಾಳಂ ನಲ್ಲಿ ಬಿಡುಗಡೆ ಆಗಿದೆ. ಇದಕ್ಕೇನು ಅರ್ಥವಿಲ್ಲವೇ, ಭಾಷೆಯ ಬಗ್ಗೆ ಗೌರವ ಬೇಡವೇ, ನಮ್ಮ ಭಾಷೆ ಏನಾಯ್ತು, ಈ ನ್ಯಾಯಾಲಯಗಳಿಗೆ ಇದೆಲ್ಲಾ ಯಾಕೆ ಅರ್ಥವಾಗುತ್ತಿಲ್ಲ' ಎಂದು ಸಾ.ರಾ.ಗೋವಿಂದು ಅಸಮಾಧಾನ ಹೊರಹಾಕಿದ್ದಾರೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm