ಬ್ರೇಕಿಂಗ್ ನ್ಯೂಸ್
02-02-21 02:24 pm Source: FILMIBEAT Shruthi Gk ಸಿನಿಮಾ
ಕಥೆ ಕದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಚೆನ್ನೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶಂಕರ್ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಐಶ್ವರ್ಯ ರೈ ನಟನೆಯ ಎಂದಿರನ್ ಸಿನಿಮಾದ ಕಥೆ ಕಳ್ಳತನದ ಪ್ರಕರಣದಲ್ಲಿ ಶಂಕರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಶಂಕರ್ ವಿರುದ್ಧ ವಾರೆಂಟ್ ಜಾರಿಯಾಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಶಂಕರ್, 'ಈ ಸುದ್ದಿ ನೋಡಿ ಆಘಾತವಾಗಿದೆ. ನಮ್ಮ ವಕೀಲರು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಜಾಮೀನು ರಹಿತ ವಾರೆಂಟ್ ಬಂದಿಲ್ಲ. ಇದು ವದಂತಿ ಅಷ್ಟೆ. ಆನ್ ಲೈನ್ ನ್ಯಾಯಾಲಯದ ವರದಿಯ ದೋಷದಿಂದ ಹಾಗಾಗಿರಬಹುದು. ಈಗ ಸರಿಪಡಿಸಲಾಗಿದೆ. ಯಾವುದೇ ಪರಿಶೀಲನೆ ಮಾಡದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದು ಬೇಸರ ತಂದಿದೆ. ಇದು ನಮ್ಮ ಕುಟುಂಬ ಮತ್ತು ಹಿತೈಶಿಗಳಿಗೂ ನೋವುಂಟು ಮಾಡಿದೆ' ಎಂದು ಹೇಳಿದ್ದಾರೆ. ಎಂದಿರನ್ ಸಿನಿಮಾ 2010ರಲ್ಲಿ ತೆರೆಗೆ ಬಂದಿದೆ.
ಈ ಸಿನಿಮಾ ರಿಲೀಸ್ ಆದ ಸಮಯದಲ್ಲಿ ಶಾರ್ಟ್ ಸ್ಟೋರಿ ಬರಹಗಾರ ತಮಿಳುನಾಡನ್ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದರು. ಶಂಕರ್, ತನ್ನ ಕಥೆ 'ಜಿಗುಬಾ' ಎನ್ನುವ ಕಥೆಯನ್ನು ಕದ್ದಿರುವುದಾಗಿ ಆರೋಪಿಸಿದ್ದರು. ಈ ಕಥೆ ತಮಿಳು ನಿಯತಕಾಲಿಕೆ ಪ್ರಕರಟವಾಗಿದ್ದಲ್ಲದೆ, ಕಾದಂಬರಿಯಾಗಿಯೂ ಪ್ರಕಟಿಸಲಾಗಿದೆ ಎಂದು ತಮಿಳುನಾಡನ್ ಉಲ್ಲೇಖಿಸಿದ್ದಾರೆ
ತನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದೆ. ಸಿನಿಮಾ ಕೋಟಿ ಕೋಟಿ ಗಳಿಸಿದೆ. ಆದರೆ ಇದು ನನ್ನ ಆಲೋಚನೆ ಎಂದು ದೂರಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾದರೂ, ಶಂಕರ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎನ್ನುವ ಸುದ್ದಿ ಹರಿದಾಡಿತ್ತು.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm