ಬ್ರೇಕಿಂಗ್ ನ್ಯೂಸ್
02-02-21 02:24 pm Source: FILMIBEAT Shruthi Gk ಸಿನಿಮಾ
ಕಥೆ ಕದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಚೆನ್ನೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶಂಕರ್ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಐಶ್ವರ್ಯ ರೈ ನಟನೆಯ ಎಂದಿರನ್ ಸಿನಿಮಾದ ಕಥೆ ಕಳ್ಳತನದ ಪ್ರಕರಣದಲ್ಲಿ ಶಂಕರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಶಂಕರ್ ವಿರುದ್ಧ ವಾರೆಂಟ್ ಜಾರಿಯಾಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಶಂಕರ್, 'ಈ ಸುದ್ದಿ ನೋಡಿ ಆಘಾತವಾಗಿದೆ. ನಮ್ಮ ವಕೀಲರು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಜಾಮೀನು ರಹಿತ ವಾರೆಂಟ್ ಬಂದಿಲ್ಲ. ಇದು ವದಂತಿ ಅಷ್ಟೆ. ಆನ್ ಲೈನ್ ನ್ಯಾಯಾಲಯದ ವರದಿಯ ದೋಷದಿಂದ ಹಾಗಾಗಿರಬಹುದು. ಈಗ ಸರಿಪಡಿಸಲಾಗಿದೆ. ಯಾವುದೇ ಪರಿಶೀಲನೆ ಮಾಡದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದು ಬೇಸರ ತಂದಿದೆ. ಇದು ನಮ್ಮ ಕುಟುಂಬ ಮತ್ತು ಹಿತೈಶಿಗಳಿಗೂ ನೋವುಂಟು ಮಾಡಿದೆ' ಎಂದು ಹೇಳಿದ್ದಾರೆ. ಎಂದಿರನ್ ಸಿನಿಮಾ 2010ರಲ್ಲಿ ತೆರೆಗೆ ಬಂದಿದೆ.
ಈ ಸಿನಿಮಾ ರಿಲೀಸ್ ಆದ ಸಮಯದಲ್ಲಿ ಶಾರ್ಟ್ ಸ್ಟೋರಿ ಬರಹಗಾರ ತಮಿಳುನಾಡನ್ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದರು. ಶಂಕರ್, ತನ್ನ ಕಥೆ 'ಜಿಗುಬಾ' ಎನ್ನುವ ಕಥೆಯನ್ನು ಕದ್ದಿರುವುದಾಗಿ ಆರೋಪಿಸಿದ್ದರು. ಈ ಕಥೆ ತಮಿಳು ನಿಯತಕಾಲಿಕೆ ಪ್ರಕರಟವಾಗಿದ್ದಲ್ಲದೆ, ಕಾದಂಬರಿಯಾಗಿಯೂ ಪ್ರಕಟಿಸಲಾಗಿದೆ ಎಂದು ತಮಿಳುನಾಡನ್ ಉಲ್ಲೇಖಿಸಿದ್ದಾರೆ
ತನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದೆ. ಸಿನಿಮಾ ಕೋಟಿ ಕೋಟಿ ಗಳಿಸಿದೆ. ಆದರೆ ಇದು ನನ್ನ ಆಲೋಚನೆ ಎಂದು ದೂರಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾದರೂ, ಶಂಕರ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎನ್ನುವ ಸುದ್ದಿ ಹರಿದಾಡಿತ್ತು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm