ಬ್ರೇಕಿಂಗ್ ನ್ಯೂಸ್
02-02-21 02:24 pm Source: FILMIBEAT Shruthi Gk ಸಿನಿಮಾ
ಕಥೆ ಕದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಚೆನ್ನೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಶಂಕರ್ ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಐಶ್ವರ್ಯ ರೈ ನಟನೆಯ ಎಂದಿರನ್ ಸಿನಿಮಾದ ಕಥೆ ಕಳ್ಳತನದ ಪ್ರಕರಣದಲ್ಲಿ ಶಂಕರ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಇರುವ ಕಾರಣ ಶಂಕರ್ ವಿರುದ್ಧ ವಾರೆಂಟ್ ಜಾರಿಯಾಗಿದೆ ಎನ್ನುವ ಸುದ್ದಿ ವೈರಲ್ ಆಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಶಂಕರ್, 'ಈ ಸುದ್ದಿ ನೋಡಿ ಆಘಾತವಾಗಿದೆ. ನಮ್ಮ ವಕೀಲರು ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಜಾಮೀನು ರಹಿತ ವಾರೆಂಟ್ ಬಂದಿಲ್ಲ. ಇದು ವದಂತಿ ಅಷ್ಟೆ. ಆನ್ ಲೈನ್ ನ್ಯಾಯಾಲಯದ ವರದಿಯ ದೋಷದಿಂದ ಹಾಗಾಗಿರಬಹುದು. ಈಗ ಸರಿಪಡಿಸಲಾಗಿದೆ. ಯಾವುದೇ ಪರಿಶೀಲನೆ ಮಾಡದೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದು ಬೇಸರ ತಂದಿದೆ. ಇದು ನಮ್ಮ ಕುಟುಂಬ ಮತ್ತು ಹಿತೈಶಿಗಳಿಗೂ ನೋವುಂಟು ಮಾಡಿದೆ' ಎಂದು ಹೇಳಿದ್ದಾರೆ. ಎಂದಿರನ್ ಸಿನಿಮಾ 2010ರಲ್ಲಿ ತೆರೆಗೆ ಬಂದಿದೆ.
ಈ ಸಿನಿಮಾ ರಿಲೀಸ್ ಆದ ಸಮಯದಲ್ಲಿ ಶಾರ್ಟ್ ಸ್ಟೋರಿ ಬರಹಗಾರ ತಮಿಳುನಾಡನ್ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದರು. ಶಂಕರ್, ತನ್ನ ಕಥೆ 'ಜಿಗುಬಾ' ಎನ್ನುವ ಕಥೆಯನ್ನು ಕದ್ದಿರುವುದಾಗಿ ಆರೋಪಿಸಿದ್ದರು. ಈ ಕಥೆ ತಮಿಳು ನಿಯತಕಾಲಿಕೆ ಪ್ರಕರಟವಾಗಿದ್ದಲ್ಲದೆ, ಕಾದಂಬರಿಯಾಗಿಯೂ ಪ್ರಕಟಿಸಲಾಗಿದೆ ಎಂದು ತಮಿಳುನಾಡನ್ ಉಲ್ಲೇಖಿಸಿದ್ದಾರೆ
ತನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದೆ. ಸಿನಿಮಾ ಕೋಟಿ ಕೋಟಿ ಗಳಿಸಿದೆ. ಆದರೆ ಇದು ನನ್ನ ಆಲೋಚನೆ ಎಂದು ದೂರಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭವಾದರೂ, ಶಂಕರ್ ಅಥವಾ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ ಎನ್ನುವ ಸುದ್ದಿ ಹರಿದಾಡಿತ್ತು.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 01:32 pm
HK News Desk
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm