ಬ್ರೇಕಿಂಗ್ ನ್ಯೂಸ್
03-02-21 04:42 pm Source: FILMIBEAT ಸಿನಿಮಾ
'ಮನರಂಜನೆ ಬಹಳ ಮುಖ್ಯ, ಆದರೆ ಮನರಂಜನೆಗಿಂತ ಜನರ ಆರೋಗ್ಯ, ಕ್ಷೇಮ ಮುಖ್ಯ, ಹಾಗಾಗಿ, ಚಿತ್ರಮಂದಿರಗಳಿಗೆ ಸದ್ಯಕ್ಕೆ ನೂರರಷ್ಟು ಅವಕಾಶ ಕೊಡುವುದು ಸೂಕ್ತವಲ್ಲ'' ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ಫೆಬ್ರವರಿ 1 ರಿಂದ ದೇಶಾದ್ಯಂತ ಚಿತ್ರಮಂದಿರಗಳಲ್ಲಿ 100 ಪರ್ಸೆಂಟ್ ಆಸನ ಭರ್ತಿಯೊಂದಿಗೆ ಪ್ರದರ್ಶನ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಕರ್ನಾಟಕದ ಸರ್ಕಾರ ಈ ಆದೇಶಕ್ಕೆ ತಡೆ ನೀಡಿದ್ದು, ಈ ತಿಂಗಳ ಅಂತ್ಯದವರೆಗೂ ಯಥಾಸ್ಥಿತಿಯಲ್ಲಿ ಚಿತ್ರಮಂದಿರಗಳು ಕಾರ್ಯನಿರ್ವಹಿಸಲಿ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಧ್ರುವ ಸರ್ಜಾ, ದುನಿಯಾ ವಿಜಯ್, ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಶಿವಣ್ಣ ಸೇರಿದಂತೆ ಹಲವರು ''ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಮತಿ ಕೊಡಿ'' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಕುರಿತು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಕೀಯ ಸಭೆಯೂ ಸರಿ ಅಂತ ನಾನು ಹೇಳಲ್ಲ
ರಾಜಕೀಯ ಸಭೆ ನಡೆಯುತ್ತೆ, ಮಾರ್ಕೆಟ್ನಲ್ಲಿ ಜನ ಸೇರ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಸುಧಾಕರ್ ''ರಾಜಕಾರಣದ ಸಭೆ ಸರಿ ಅಂತ ನಾವು ಹೇಳಿಲ್ಲ. ಅದೂ ಸರಿ ಅಂತನೂ ಹೇಳಲ್ಲ. ಆದ್ರೆ ಅದು ಹೊರಗಡೆ ಮಾಡ್ತಿದ್ದಾರೆ, ಹೊರಗಡೆ ಆದರೂ ಅದು ಸರಿಯಲ್ಲ. ಸಾಧ್ಯವಾದ ಕಡೆ ಸೋಂಕು ನಿಯಂತ್ರಣ ಮಾಡೋದು ನಮ್ಮ ಸರ್ಕಾರದ ಜವಾಬ್ದಾರಿ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿದೆ
''ಕೇಂದ್ರ ಸರ್ಕಾರ ಚಿತ್ರಮಂದಿರಗಳಲ್ಲಿ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಸೂಚಿಸಿದೆ. ಹೆಚ್ಚಿನ ಅವಕಾಶ ನೀಡಲು ಆಯಾ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲು ಸೂಚಿಸಿದೆ. ನಮ್ಮ ತಾಂತ್ರಿಕ ಸಲಹಾ ಸಮಿತಿ ಸಲಹೆ ಪ್ರಕಾರ ಫೆಬ್ರವರಿ 28ವರೆಗು ಶೇ 50ರಷ್ಟು ಮುಂದುವರಿಯಲಿ ಎಂದು ಹೇಳಿದ್ದೇವೆ. ನೆರೆಯ ಕೇರಳದಲ್ಲಿ ಪ್ರತೀ ದಿನ 5 ಸಾವಿರ ಕೇಸ್ ದಾಖಲಾಗುತ್ತಿದೆ. ಮನರಂಜನೆ ಬಹಳ ಮುಖ್ಯ, ಮನರಂಜನೆಗಿಂತ ಮುಖ್ಯ ಜನರ ಆರೋಗ್ಯ, ಕ್ಷೇಮ'' ಎಂದು ಸುಧಾಕರ್ ಹೇಳಿದರು.
ಮತ್ತೊಮ್ಮೆ ಸಭೆ ಮಾಡ್ತೇನೆ
''ನಾನು ಮಂತ್ರಿಯಾಗಿ ಏಕಾಏಕಿ ನಿರ್ಧಾರ ಸಾಧ್ಯವಾಗಲ್ಲ. ಮತ್ತೊಮ್ಮೆ ಸಿಎಂ ಮತ್ತು ತಾಂತ್ರಿಕ ಸಲಹ ಸಮಿತಿ ಜೊತೆ ಸಭೆ ಮಾಡುತ್ತೇನೆ. ಅವರ ಸಲಹೆ ಮೇರೆಗೆ ಅಂತಿಮ ನಿರ್ಧಾರ ಮಾಡುತ್ತೇನೆ'' ಎಂದು ಕೊನೆಯಲ್ಲಿ ಭರವಸೆ ನೀಡಿದರು.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm