ಬ್ರೇಕಿಂಗ್ ನ್ಯೂಸ್
03-02-21 04:52 pm Source: FILMIBEAT Bharath Kumar K ಸಿನಿಮಾ
ಚಿತ್ರಮಂದಿರಗಳ ಮೇಲಿನ ಶೇಕಡಾ 50 ರಷ್ಟು ನಿರ್ಬಂಧ ಮುಂದುವರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ಯಾಂಡಲ್ವುಡ್ ಸ್ಟಾರ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ ರಾಜ್ಯ ಸರ್ಕಾರ ಒಪ್ಪಿಗೆ ನೀಡದಿರುವುದನ್ನು ಪ್ರಶ್ನಿಸಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿರ್ದೇಶಕ ಪ್ರಶಾಂತ್ ನೀಲ್, ಸಿಂಪಲ್ ಸುನಿ, ಸಂತೋಷ್ ಆನಂದ್ ರಾಮ್, ನಿರ್ಮಾಪಕ ಕಾರ್ತಿಕ್ ಗೌಡ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.
ಇದೀಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಟ್ವಿಟ್ಟರ್ನಲ್ಲಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ''ಖಾಸಗಿ ಕಾರ್ಯಕ್ರಮಗಳು, ಪೂಜಾ ಸ್ಥಳಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ಸ್ಥಳಗಳು ಹೀಗೆ ಎಲ್ಲವೂ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿಸಿದಾಗ, ಚಿತ್ರಮಂದಿರಗಳು ಮಾತ್ರ ಏಕೆ ಮಾಡಬಾರದು!?'' ಎಂದಿದ್ದಾರೆ.
ಪುನೀತ್ ರಾಜ್ ಕುಮಾರ್ ಟ್ವೀಟ್ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಸಹ ಈ ಕುರಿತು ಟ್ವೀಟ್ ಮಾಡಿ ''ಎಲ್ಲ ಸಾರ್ವಜನಿಕ ಸ್ಥಳಗಳು ಜನರಿಂದ ವ್ಯವಹರಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮತ್ತೊಮ್ಮೆ ಚಿತ್ರಮಂದಿರವನ್ನು 50% ಕ್ಕೆ ಸೀಮಿತಗೊಳಿಸಿದೆ. ಏಕೆ? ಸಿನಿಮಾ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!'' ಎಂದು ಅಸಮಾಧಾನ ತೋರಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm