ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm