ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm