ಬ್ರೇಕಿಂಗ್ ನ್ಯೂಸ್
03-02-21 04:56 pm Source: FILMIBEAT Manjunatha C ಸಿನಿಮಾ
ನಟ ಪ್ರಭಾಸ್ ನಟಿಸುತ್ತಿರುವ ಎರಡು ಸಿನಿಮಾಗಳ ಸೆಟ್ಗಳಲ್ಲಿ ಒಂದೇ ದಿನ ಅವಘಡ ಸಂಭವಿಸಿದೆ. ನಟ ಪ್ರಭಾಸ್ ನಟಿಸುತ್ತಿರುವ ಭಾರಿ ಬಜೆಟ್ ಸಿನಿಮಾ 'ಆದಿಪುರುಷ್' ನ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.
ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲವಾದರೂ ಬೆಂಕಿಯಿಂದ ಭಾರಿ ನಷ್ಟವೇ ಉಂಟಾಯಿತು. ಮತ್ತೊಂದೆಡೆ ಪ್ರಭಾಸ್ ನಟಿಸಿ, ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ 'ಸಲಾರ್' ಸಿನಿಮಾದ ಸೆಟ್ನ ಬಳಿಯೂ ಅಪಘಾತವೊಂದು ಸಂಭವಿಸಿದೆ.
'ಸಲಾರ್' ಚಿತ್ರೀಕರಣವು ಗೋಧಾವತಿಕನಿ ಎಂಬಲ್ಲಿ ನಡೆಯುತ್ತಿದ್ದು, ಚಿತ್ರೀಕರಣ ಮುಗಿಸಿದ ಚಿತ್ರತಂಡದ ಕೆಲವರು ಹೋಟೆಲ್ಗೆ ವಾಪಸ್ ಬರುವಾಗ ಚಿತ್ರತಂಡವನ್ನು ಹೊತ್ತು ಬರುತ್ತಿದ್ದ ವಾಹನವು ಲಾರಿಯೊಂದಕ್ಕೆ ಗುದ್ದಿದೆ.
ಚಿತ್ರತಂಡದ ಸದಸ್ಯರಿಗೆ ಗಾಯಕಗಳಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಮಮತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಬೇಗನೇ ಹುಷಾರಾಗಿ ಎಂದು ಪ್ರಭಾಸ್ ಹಾಗೂ ಶ್ರುತಿ ಹಾಸನ್ ಸಂದೇಶ ಕಳಿಸಿದ್ದಾರೆ ಎನ್ನಲಾಗಿದೆ.
ಗೋಧಾವರಿ ಗಣಿಯಲ್ಲಿ ಕೆಲವು ದಿನಗಳಿಂದಲೂ ಸಲಾರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಪ್ರಭಾಸ್ ಹಾಗೂ ಶ್ರುತಿ ಹಾಸನ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ನಿನ್ನೆಯೇ (ಜನವರಿ 02) ರಂದು ನಟ ಪ್ರಭಾಸ್ ನಟಿಸುತ್ತಿರುವ 'ಆದಿಪುರುಷ್' ಸಿನಿಮಾ ಸೆಟ್ನಲ್ಲೂ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಮುಂಬೈನ ಗೊರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್ ನ ಹಿಂಭಾಗದ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಸೆಟ್ನಲ್ಲಿ 60-70 ಜನರಿದ್ದರು. ಸಂಜೆ 4:15 ಕ್ಕೆ ಬೆಂಕಿ ಅವಘಡ ಸಂಭವಿಸಿತು. ಆದರೆ ಅಲ್ಲಿ ಯಾರಿಗೂ ಗಾಯ ಅಥವಾ ಪ್ರಾಣ ಹಾನಿ ಆಗಲಿಲ್ಲ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm