ಬ್ರೇಕಿಂಗ್ ನ್ಯೂಸ್
04-02-21 12:57 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಟೀಸರ್ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಕಂಡಿತ್ತು.
ವಿಶ್ವ ವಿಖ್ಯಾತ ಕಟ್ಟಡದ ಮೇಲೆ ಆರಡಿ ಕಟೌಟ್ ನ ಆರ್ಬಟ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದರು. ವಿಕ್ರಾಂತ್ ರೋಣ ಬೆನ್ನಲ್ಲೇ ಇದೀಗ ಸುದೀಪ್ ಕೋಟಿಗೊಬ್ಬನ ದರ್ಶನ ಮಾಡಿಸಲು ಸಜ್ಜಾಗಿದ್ದಾರೆ. ಹೌದು, ಕಿಚ್ಚ ನಟನೆಯ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿನಿಮಾ ರಿಲೀಸ್ ಗೂ ಮೊದಲು ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಕೋಟಿಗೊಬ್ಬ-3 ಚಿತ್ರದ ಹಾಡುಗಳನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎನ್ನುವುದು ತಂಡದ ಪ್ಲಾನ್. ಅದರಂತೆ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಮೂಲಗಳ ಪ್ರಕಾರ ಕೋಟಿಗೊಬ್ಬ-3 ಸಿನಿಮಾದ ಹಾಡುಗಳು ಮಾರ್ಚ್ 28ರಂದು ಬಿಡುಗಡೆಗೆ ಆಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುತ್ತಿದೆ. ಯಾರೆಲ್ಲ ಗೆಸ್ಟ್ ಭಾಗಿಯಾಗಲಿದ್ದಾರೆ, ಚಿತ್ರದ ಹಾಡುಗಳು ಯಾರಿಂದ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಣ್ಣದ ಲೋಕದಲ್ಲಿ 25 ವರ್ಷ ಪೂರೈಸಿರುವ ಸುದೀಪ್, ಈ ಸಂಭ್ರಮವನ್ನು ದುಬೈನಲ್ಲಿ ಆಚರಿಸಿದ್ದಾರೆ. ಸದ್ಯ ದುಬೈನಿಂದ ವಾಪಸ್ ಆಗಿರುವ ಕಿಚ್ಚ ಕೋಟಿಗೊಬ್ಬ-3 ಪ್ರಮೋಷನ್ ನಲ್ಲಿ ಭಾಗಿಯಾಗಲಿದ್ದಾರೆ. ಕೋಟಿಗೊಬ್ಬ 3ನೇ ಸರಣಿಗೆ ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಕಿಚ್ಚ ಸುದೀಪ್ ಜೊತೆ ನಾಯಕಿಯಾಗಿ ಮಲಯಾಳಂ ಸುಂದರಿ ಮಡೊನ್ನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಇನ್ನು ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ರವಿಶಂಕರ್ ಸೇರಿದಂತೆ ಅನೇಕರಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm