ಬ್ರೇಕಿಂಗ್ ನ್ಯೂಸ್
04-02-21 12:57 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಟೀಸರ್ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಕಂಡಿತ್ತು.
ವಿಶ್ವ ವಿಖ್ಯಾತ ಕಟ್ಟಡದ ಮೇಲೆ ಆರಡಿ ಕಟೌಟ್ ನ ಆರ್ಬಟ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದರು. ವಿಕ್ರಾಂತ್ ರೋಣ ಬೆನ್ನಲ್ಲೇ ಇದೀಗ ಸುದೀಪ್ ಕೋಟಿಗೊಬ್ಬನ ದರ್ಶನ ಮಾಡಿಸಲು ಸಜ್ಜಾಗಿದ್ದಾರೆ. ಹೌದು, ಕಿಚ್ಚ ನಟನೆಯ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿನಿಮಾ ರಿಲೀಸ್ ಗೂ ಮೊದಲು ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಕೋಟಿಗೊಬ್ಬ-3 ಚಿತ್ರದ ಹಾಡುಗಳನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎನ್ನುವುದು ತಂಡದ ಪ್ಲಾನ್. ಅದರಂತೆ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಮೂಲಗಳ ಪ್ರಕಾರ ಕೋಟಿಗೊಬ್ಬ-3 ಸಿನಿಮಾದ ಹಾಡುಗಳು ಮಾರ್ಚ್ 28ರಂದು ಬಿಡುಗಡೆಗೆ ಆಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುತ್ತಿದೆ. ಯಾರೆಲ್ಲ ಗೆಸ್ಟ್ ಭಾಗಿಯಾಗಲಿದ್ದಾರೆ, ಚಿತ್ರದ ಹಾಡುಗಳು ಯಾರಿಂದ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಣ್ಣದ ಲೋಕದಲ್ಲಿ 25 ವರ್ಷ ಪೂರೈಸಿರುವ ಸುದೀಪ್, ಈ ಸಂಭ್ರಮವನ್ನು ದುಬೈನಲ್ಲಿ ಆಚರಿಸಿದ್ದಾರೆ. ಸದ್ಯ ದುಬೈನಿಂದ ವಾಪಸ್ ಆಗಿರುವ ಕಿಚ್ಚ ಕೋಟಿಗೊಬ್ಬ-3 ಪ್ರಮೋಷನ್ ನಲ್ಲಿ ಭಾಗಿಯಾಗಲಿದ್ದಾರೆ. ಕೋಟಿಗೊಬ್ಬ 3ನೇ ಸರಣಿಗೆ ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಕಿಚ್ಚ ಸುದೀಪ್ ಜೊತೆ ನಾಯಕಿಯಾಗಿ ಮಲಯಾಳಂ ಸುಂದರಿ ಮಡೊನ್ನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಇನ್ನು ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ರವಿಶಂಕರ್ ಸೇರಿದಂತೆ ಅನೇಕರಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.
This News Article is a Copy of FILMIBEAT
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm