ಬ್ರೇಕಿಂಗ್ ನ್ಯೂಸ್
04-02-21 12:57 pm Source: FILMIBEAT Shruthi Gk ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚಿಗಷ್ಟೆ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬಹುನಿರೀಕ್ಷೆಯ ವಿಕ್ರಾಂತ್ ರೋಣ ಟೀಸರ್ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಪ್ರದರ್ಶನ ಕಂಡಿತ್ತು.
ವಿಶ್ವ ವಿಖ್ಯಾತ ಕಟ್ಟಡದ ಮೇಲೆ ಆರಡಿ ಕಟೌಟ್ ನ ಆರ್ಬಟ ನೋಡಿ ಅಭಿಮಾನಿಗಳು ಸಂತಸ ಪಟ್ಟಿದ್ದರು. ವಿಕ್ರಾಂತ್ ರೋಣ ಬೆನ್ನಲ್ಲೇ ಇದೀಗ ಸುದೀಪ್ ಕೋಟಿಗೊಬ್ಬನ ದರ್ಶನ ಮಾಡಿಸಲು ಸಜ್ಜಾಗಿದ್ದಾರೆ. ಹೌದು, ಕಿಚ್ಚ ನಟನೆಯ ಕೋಟಿಗೊಬ್ಬ-3 ಸಿನಿಮಾ ಏಪ್ರಿಲ್ 29ಕ್ಕೆ ತೆರೆಗೆ ಬರುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಸಿನಿಮಾ ರಿಲೀಸ್ ಗೂ ಮೊದಲು ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ. ಕೋಟಿಗೊಬ್ಬ-3 ಚಿತ್ರದ ಹಾಡುಗಳನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಬೇಕು ಎನ್ನುವುದು ತಂಡದ ಪ್ಲಾನ್. ಅದರಂತೆ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಮೂಲಗಳ ಪ್ರಕಾರ ಕೋಟಿಗೊಬ್ಬ-3 ಸಿನಿಮಾದ ಹಾಡುಗಳು ಮಾರ್ಚ್ 28ರಂದು ಬಿಡುಗಡೆಗೆ ಆಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲಾಗುತ್ತಿದೆ. ಯಾರೆಲ್ಲ ಗೆಸ್ಟ್ ಭಾಗಿಯಾಗಲಿದ್ದಾರೆ, ಚಿತ್ರದ ಹಾಡುಗಳು ಯಾರಿಂದ ಬಿಡುಗಡೆಯಾಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಣ್ಣದ ಲೋಕದಲ್ಲಿ 25 ವರ್ಷ ಪೂರೈಸಿರುವ ಸುದೀಪ್, ಈ ಸಂಭ್ರಮವನ್ನು ದುಬೈನಲ್ಲಿ ಆಚರಿಸಿದ್ದಾರೆ. ಸದ್ಯ ದುಬೈನಿಂದ ವಾಪಸ್ ಆಗಿರುವ ಕಿಚ್ಚ ಕೋಟಿಗೊಬ್ಬ-3 ಪ್ರಮೋಷನ್ ನಲ್ಲಿ ಭಾಗಿಯಾಗಲಿದ್ದಾರೆ. ಕೋಟಿಗೊಬ್ಬ 3ನೇ ಸರಣಿಗೆ ನಿರ್ಮಾಪಕ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಶಿವ ಕಾರ್ತಿಕ್ ಆಕ್ಷನ್ ಕಟ್ ಹೇಳಿದ್ದಾರೆ.
ಚಿತ್ರದಲ್ಲಿ ದೊಡ್ಡ ಕಲಾವಿದರ ದಂಡೆ ಇದೆ. ಕಿಚ್ಚ ಸುದೀಪ್ ಜೊತೆ ನಾಯಕಿಯಾಗಿ ಮಲಯಾಳಂ ಸುಂದರಿ ಮಡೊನ್ನಾ ಸೆಬಾಸ್ಟಿಯನ್ ಕಾಣಿಸಿಕೊಂಡಿದ್ದಾರೆ. ಇನ್ನು ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸಾನಿ ರವಿಶಂಕರ್ ಸೇರಿದಂತೆ ಅನೇಕರಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರದ ಹಾಡುಗಳು ಹೇಗಿರಲಿದೆ ಎನ್ನುವ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು. ಆಡಿಯೋ ರಿಲೀಸ್ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗ ಪಡಿಸುವ ಸಾಧ್ಯತೆ ಇದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm