ಬ್ರೇಕಿಂಗ್ ನ್ಯೂಸ್
05-02-21 01:24 pm Source: FILMIBEAT Shruthi Gk ಸಿನಿಮಾ
ಕನ್ನಡ ಚಿತ್ರರಂಗದ ಹಿರಿಯ ನಟಿ ಮಹಾಲಕ್ಷ್ಮಿ 3 ದಶಕಗಳ ಬಳಿಕ ಮತ್ತೆ ಕನ್ನಡ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. 1980-90ರ ದಶಕದಲ್ಲಿ ಚಿತ್ರರಂಗವನ್ನಾಳಿದ ನಟಿ ಮಹಾಲಕ್ಷ್ಮಿ ದಿಢೀರನೆ ಬಣ್ಣದ ಲೋಕದಿಂದ ಮಾಯವಾಗಿದ್ದರು. ಅದ್ಭುತ ಅಭಿನಯದ ಮೂಲಕ ಕನ್ನಡ ಚಿತ್ರ ಪ್ರೇಕ್ಷಕರನ್ನು ರಂಜಿಸಿ, ಹೇಳದೆ ಕೇಳದೆ ಮಾಯವಾಗಿದ್ದ ಮಹಾಲಕ್ಷ್ಮಿ ಈಗ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಆಗಿರುವುದು ಕನ್ನಡ ಚಿತ್ರಾಭಿಮಾನಿಗಳಿಗೆ ಸಂತಸ ತಂದಿದೆ. ಮಹಾಲಕ್ಷ್ಮಿ ಎಲ್ಲಿದ್ದರು? ಏನ್ಮಾಡುತ್ತಿದ್ದರು? ಎನ್ನುವ ಪ್ರಶ್ನೆ ಚಿತ್ರಪ್ರೇಕ್ಷಕರನ್ನು 30 ವರ್ಷಗಳಿಂದ ಕಾಡಿತ್ತು. ಆದರೆ ಈ ಎಲ್ಲಾ ಪ್ರಶ್ನೆಗೆ ಉತ್ತರದೊಂದಿಗೆ ಮಹಾಲಕ್ಷ್ಮಿ 2019ರಲ್ಲಿ ಪ್ರತ್ಯಕ್ಷರಾಗಿ ಅಚ್ಚರಿ ಮೂಡಿಸಿದ್ದರು. 2019ರಲ್ಲಿ ಫಿಲ್ಮಿ ಬೀಟ್ ಕನ್ನಡಕ್ಕೆ ನೀಡಿದ ಎಕ್ಸಕ್ಲೂಸಿವ್ ಸಂದರ್ಶನದಲ್ಲಿ 30 ವರ್ಷದ ನಿಗೂಢ ಪಯಣದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದರು
2019ರಲ್ಲಿ ಫಿಲ್ಮಿ ಬೀಟ್ ಕನ್ನಡದ ಜೊತೆ ಮಾತನಾಡಿದ್ದ ಮಹಾಲಕ್ಷ್ಮಿ
'ನಾನು ತುಂಬ ತುಂಬಾ ಚೆನ್ನಾಗಿ ಇದ್ದೀನಿ. ನನ್ನ ಬಗ್ಗೆ ಕೇಳಿ ಬರುತ್ತಿದ್ದ ಸುದ್ದಿಗಳೆಲ್ಲ ರೂಮರ್ಸ್ ಅಷ್ಟೆ, ನನಗೆ ತುಂಬ ಒಳ್ಳೆಯ ಫ್ಯಾಮಿಲಿ ಇದೆ. ನಾನು ಹೌಸ್ ವೈಫ್ ಆಗಿದ್ದೀನಿ, ನಾನು ಸನ್ಯಾಸಿ ಅಲ್ಲ, ನಾನು ಸಂಸಾರಸ್ತೆ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ. ಚರ್ಚ್ ನಲ್ಲಿ ಕೆಲಸ ಮಾಡುತ್ತಿರುವುದು ನಿಜ ಆದರೆ ಸನ್ಯಾಸಿ ಅಲ್ಲ. ನಾನೂ ಚೆನ್ನೈನಲ್ಲಿ ನೆಲೆಸಿದ್ದೀನಿ' ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು.

ಎರಡನೇ ಇನ್ನಿಂಗ್ಸ್ ಪ್ರಾಂಭಿಸಿರುವ ನಟಿ
ಅದೇ ಸಮಯದಲ್ಲಿ ಮತ್ತೆ ಬಣ್ಣದ ಲೋಕಕ್ಕೆ ವಾಪಸ್ ಬರುವುದಾಗಿ ಹೇಳಿದ್ದರು. ಅದರಂತೆ ಈಗ ಮಹಾಲಕ್ಷ್ಮಿ ಬಣ್ಣದ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದಾರೆ. ಕನ್ನಡ ಸಿನಿಮಾವೊಂದರಲ್ಲಿ ನಟಿಸಲು ಸಜ್ಜಾಗಿದ್ದಾರೆ. ಇತ್ತೀಚಿಗೆ ಮಹಾಲಕ್ಷ್ಮಿ ನಟನೆಯ ಹೊಸ ಸಿನಿಮಾದ ಮುಹೂರ್ತ ಕೂಡ ನೆರವೇರಿದೆ.
TRP ರಾಮ ಸಿನಿಮಾದಲ್ಲಿ ನಟನೆ
ಹೌದು, ಮಹಾಲಕ್ಷ್ಮಿ TRP ರಾಮ ಎನ್ನುವ ಸಿನಿಮಾ ಮೂಲಕ ಮತ್ತೆ ಕನ್ನಡ ಚಿತ್ರಾಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಚಿತ್ರದಲ್ಲಿ ಮಹಾಲಕ್ಷ್ಮಿ ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟನೆಗೆ ತುಂಬಾ ಪ್ರಾಮುಖ್ಯತೆ ಇರುವ ಪಾತ್ರವಾಗಿದ್ದರಿಂದ ಈ ಸಿನಿಮಾ ಒಪ್ಪಿಕೊಂಡಿರುವುದಾಗಿ ಹೇಳಿದ್ದಾರೆ.

TRP ರಾಮ ಸಿನಿಮಾದ ಬಗ್ಗೆ
TRP ರಾಮ ಚಿತ್ರದಲ್ಲಿ ರವಿ ಪ್ರಸಾದ್ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಚಿತ್ರಕ್ಕೆ ಚಿತ್ರಸಾಹಿತಿ ಮತ್ತು ನಿರ್ದೇಶಕ ಕವಿರಾಜ್ ಚಿತ್ರಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. 30 ವರ್ಷಗಳ ಬಳಿಕ ಮತ್ತೆ ಮರಳಿರುವ ಮಹಾಲಕ್ಷ್ಮಿ ಅವರನ್ನು ತೆರೆಮೇಲೆ ನೋಡಲು ಅನೇಕರು ಕಾತರರಿದ್ದಾರೆ. ಆದರೆ ಇನ್ನು ಸ್ವಲ್ಪ ದಿನ ಕಾಯಲೇ ಬೇಕು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm