ಬ್ರೇಕಿಂಗ್ ನ್ಯೂಸ್
05-02-21 01:33 pm Source: FILMIBEAT Bharath Kumar K ಸಿನಿಮಾ
ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಗುರುವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಲ್ಮಾನ್ ಖಾನ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ತಮ್ಮ ಅನಿಸಿಕೆಯನ್ನು ಹೊರಹಾಕಿದ್ದಾರೆ.
ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಂತೆ ಬಾಲಿವುಡ್ ಸ್ಟಾರ್ಸ್ ಸಕ್ರಿಯರಾಗಿದ್ದಾರೆ. ಅಕ್ಷಯ್ ಕುಮಾರ್, ಅಜಯ್ ದೇವಗನ್, ಕರಣ್ ಜೋಹರ್ ಸೇರಿದಂತೆ ಹಲವರು ಟ್ವೀಟ್ ಮಾಡಿ ವಿದೇಶಿ ಸೆಲೆಬ್ರಿಟಿಗಳ ಬೆಂಬಲ ಖಂಡಿಸಿದ್ದಾರೆ. ಹಲವು ತಿಂಗಳಿಂದ ರೈತ ಪ್ರತಿಭಟನೆ ನಡೆಯುತ್ತಿದ್ದರೂ ಇಷ್ಟು ದಿನ ಯಾವೊಬ್ಬ ಸೆಲೆಬ್ರಿಟಿ ಸಹ ಮಾತನಾಡಿರಲಿಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಈ ಕುರಿತು ಬಿಟೌನ್ ಖಾನ್ಗಳು ತಮ್ಮ ನಿಲುವು ವ್ಯಕ್ತಪಡಿಸಿರಲಿಲ್ಲ.
ಸರಿಯಾದ ಕೆಲಸ ಮಾಡಬೇಕು
ರೈತರ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಲ್ಮಾನ್ ಖಾನ್, "ಸರಿಯಾದ ಕೆಲಸ ಮಾಡಬೇಕು. ಅತಿ ಸೂಕ್ತವೆನಿಸುವ ಕೆಲಸ ಮಾಡಬೇಕು ಹಾಗೂ ಸಮರ್ಥ ಕಾರ್ಯವನ್ನ ಕೈಗೊಳ್ಳಬೇಕು" ಎಂದಿದ್ದಾರೆ. ಇದಕ್ಕೂ ಮುಂಚೆ ಯಾವುದೇ ಸಾರ್ವಜನಿಕ ವಲಯದಲ್ಲಿ ಅಥವಾ ಸಾಮಾಜಿಕ ಜಾಲತಾಣದಲ್ಲಿ ರೈತರ ಪ್ರತಿಭಟನೆ ಕುರಿತು ಸಲ್ಮಾನ್ ಖಾನ್ ಮಾತನಾಡಿರಲಿಲ್ಲ.

ಖಾನ್ಗಳು ಮಾತನಾಡಿಲ್ಲ
ರೈತ ಪ್ರತಿಭಟನೆ ಕುರಿತು ಸಲ್ಮಾನ್ ಖಾನ್ ಕೊನೆಗೂ ಹೇಳಿಕೆ ನೀಡಿದ್ದಾರೆ. ಆದರೆ, ಶಾರೂಖ್ ಖಾನ್ ಮತ್ತು ಅಮೀರ್ ಖಾನ್ ನಿಲುವೇನು ಎನ್ನುವುದು ತಿಳಿದಿಲ್ಲ. ಈ ಇಬ್ಬರ ನಟರ ಅಭಿಪ್ರಾಯಕ್ಕಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

ವಿದೇಶಿ ಸೆಲೆಬ್ರಿಟಿಗಳು ಬೆಂಬಲ
ಬಾಲಿವುಡ್ ಸ್ಟಾರ್ಗಳು ಮಾತನಾಡುವುದಕ್ಕೂ ಮೊದಲೇ ವಿದೇಶಿ ಸೆಲೆಬ್ರಿಟಿಗಳು ಭಾರತೀಯ ರೈತರ ಪ್ರತಿಭಟನೆ ಪರ ಬೆಂಬಲ ಸೂಚಿಸಿದ್ದರು. ಅಮೆರಿಕನ್ ಪಾಪ್ ಗಾಯಕಿ ರಿಹಾನ್ನ, ಮಾಜಿ ನೀಲಿತಾರೆ ಮಿಯಾ ಖಲೀಫಾ, ಗ್ರೆಟಾ ಥೆನ್ಬರ್ಗ್ ಹಲವು ಅಂತರಾಷ್ಟ್ರೀಯ ಸೆಲೆಬ್ರಿಟಿಗಳು ದೆಹಲಿ ರೈತ ಹೋರಾಟ ಬೆಂಬಲಿಸಿದ್ದರು. ಇದು ಭಾರತೀಯ ಸೆಲೆಬ್ರಿಟಿಗಳು ಕೆರಳುವಂತೆ ಮಾಡಿದೆ. ''ನಮ್ಮ ದೇಶದ ಆಂತರಿಕ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ, ಅಪ್ರಚಾರ ಬೇಡ'' ಎಂದು ನಟ, ನಟಿಯರು ಹಾಗೂ ಕ್ರಿಕೆಟಿಗರು ಆಕ್ರೋಶ ಹೊರಹಾಕಿದ್ದರು.

ಹಿಂದಿ ಕಲಾವಿದರಿಗೆ ತಿರುಗೇಟು ನೀಡಿದ ತಾಪ್ಸಿ ಪನ್ನು
ವಿದೇಶಿ ಸೆಲೆಬ್ರಿಟಿಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್ ಸೆಲೆಬ್ರಿಟಿಗಳಿಗೆ ತಾಪ್ಸಿ ಪನ್ನು ಪ್ರತಿಕ್ರಿಯಿಸಿದ್ದರು. ''ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು'' ಎಂದು ತಿರುಗೇಟು ನೀಡಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm