ಬ್ರೇಕಿಂಗ್ ನ್ಯೂಸ್
05-02-21 01:40 pm Source: FILMIBEAT Bharath Kumar K ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ 'ರಾಬರ್ಟ್' ಚಿತ್ರದ ತೆಲುಗು ಬಿಡುಗಡೆಯ ಹಾದಿ ಸುಗಮವಾಗಿದೆ. ಏಕಕಾಲದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ರಾಬರ್ಟ್ ರಿಲೀಸ್ ಮಾಡಲು ಕಷ್ಟ ಎಂದು ಹೇಳಿದ್ದ ವಿತರಕರು ಈಗ ದಾಸನ ಚಿತ್ರಕ್ಕೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡ್ತಿದ್ದಾರೆ. ನಿಗದಿಯಾಗಿರುವಂತೆ ಮಾರ್ಚ್ 11 ರಂದೇ ಕನ್ನಡ ಮತ್ತು ತೆಲುಗಿನಲ್ಲಿ ರಾಬರ್ಟ್ ತೆರೆಕಾಣುತ್ತಿದೆ. ನೆರೆರಾಜ್ಯಗಳಲ್ಲೂ ರಾಬರ್ಟ್ ಕ್ರೇಜ್ ಜೋರಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಡಿ ಬಾಸ್ ಸಿನಿಮಾ ಬಿಡುಗಡೆಯಾಗುತ್ತಿದೆ. ತೆಲುಗಿನ ಹಿರಿಯ ನಿರ್ದೇಶಕ-ನಿರ್ಮಾಪಕ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಿನಿಮಾವನ್ನು ವಿತರಣೆ ಮಾಡ್ತಿದ್ದು, ಭಾರಿ ಬೆಲೆ ನೀಡಿ ಹಕ್ಕು ಖರೀದಿಸಿದ್ದಾರೆ ಎನ್ನಲಾಗಿದೆ.
ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ
ರಾಬರ್ಟ್ ಚಿತ್ರವನ್ನು ತೆಲುಗಿನ ಹಿರಿಯ ನಿರ್ದೇಶಕ ಚಂಚಲವಾಡ ಶ್ರೀನಿವಾಸ್ ರಾವ್ ವಿತರಣೆ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಮೂವೀಸ್ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ದರ್ಶನ್ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

ದುಬಾರಿ ಬೆಲೆಗೆ ರಾಬರ್ಟ್ ಸೇಲ್?
ರಾಬರ್ಟ್ ಚಿತ್ರದ ವಿತರಣೆ ಹಕ್ಕು ದೊಡ್ಡ ಬೆಲೆ ಮಾರಾಟ ಆಗಿದೆ ಎಂಬ ಸುದ್ದಿ ವರದಿಯಾಗಿದೆ. ಆದರೆ, ನಿಖರವಾಗಿ ಎಷ್ಟು ಹಣ ಎಂದು ಬಹಿರಂಗವಾಗಿಲ್ಲ. ದರ್ಶನ್ ಅವರ ಚಿತ್ರಕ್ಕೆ ತೆಲುಗಿನಲ್ಲಿ ಹೆಚ್ಚು ಬೇಡಿಕೆಯಿದ್ದು, ದಾಖಲೆಯ ಹಣ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

400ಕ್ಕೂ ಹೆಚ್ಚು ಥಿಯೇಟರ್?
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ರಾಬರ್ಟ್ ಚಿತ್ರಕ್ಕೆ 400ಕ್ಕೂ ಹೆಚ್ಚು ಚಿತ್ರಮಂದಿರಗಳನ್ನು ಕಾಯ್ದಿರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿ ಬಾಸ್ ಚಿತ್ರಗಳ ಪೈಕಿ ರಾಬರ್ಟ್ ಚಿತ್ರಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ದೊಡ್ಡ ಓಪನಿಂಗ್ ಸಿಗುತ್ತಿದೆ.

ಉಮಾಪತಿಗೆ ಸನ್ಮಾನ ಮಾಡಿದ್ದ ತೆಲುಗು ನಿರ್ಮಾಪಕರು
ರಾಬರ್ಟ್ ಚಿತ್ರಕ್ಕೆ ತೆಲುಗು ವಿತರಕರಿಂದ ಅಡ್ಡಿ ಎಂಬ ವಿವಾದದ ಬಳಿಕ, ಕನ್ನಡ ನಿರ್ಮಾಪಕ ಉಮಾಪತಿ ಅವರನ್ನು ಆಂಧ್ರಕ್ಕೆ ಕರೆಸಿಕೊಂಡಿದ್ದ ತೆಲುಗು ನಿರ್ಮಾಪಕರು ಸನ್ಮಾನ ಮಾಡಿದ್ದರು. ರಾಬರ್ಟ್ ಚಿತ್ರಕ್ಕೆ ಯಾವ ಅಡತಡೆಯೂ ಇರಲ್ಲ. ಸುಗಮವಾಗಿ ಬಿಡುಗಡೆಯಾಗಲಿದೆ ಎಂದು ಆಶ್ವಾಸನೆ ನೀಡಿದ್ದರು.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm