ಬ್ರೇಕಿಂಗ್ ನ್ಯೂಸ್
06-02-21 11:54 am Source: FILMIBEAT Manjunatha C ಸಿನಿಮಾ
ನಟಿ ತಾಪ್ಸಿ ಪನ್ನು ಟ್ವೀಟ್ ಸಖತ್ ವೈರಲ್ ಆಗಿದೆ. ತಾಪ್ಸಿ ಪನ್ನು ಟ್ವೀಟ್ಗೆ ಅದೇ ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದಾರೆ ಬಿಜೆಪಿಯ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ.
ಎಲ್ಲವೂ ಪ್ರಾರಂಭವಾಗಿದ್ದು ರಿಹಾನ್ನ ಟ್ವೀಟ್ ನಿಂದಾಗಿ. ಪಾಪ್ ಗಾಯಕಿ ರಿಹಾನ್ನ ಭಾರತದ ರೈತ ಪ್ರತಿಭಟನೆಗೆ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ವಿರೋಧಿಸಿ, 'ಇದು ನಮ್ಮ ಆಂತರಿಕ ವಿಷಯ ಹೊರಗಿನವರು ಮಾತನಾಡಬಾರದು' ಎಂಬರ್ಥದಲ್ಲಿ ಹಲವು ಬಾಲಿವುಡ್ ನಟರು, ಕ್ರೀಡಾ ಸ್ಟಾರ್ಗಳು ಟ್ವೀಟ್ ಮಾಡಿದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ ತಾಪ್ಸಿ ಪನ್ನು, 'ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಒಡೆಯುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲುಗಾಡಿಸುವುದಾದರೆ, ಒಂದು ಘಟನೆ ನಿಮ್ಮ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವುದಾದರೆ, ನೀವು ನಿಮ್ಮ ನಂಬಿಕೆಗಳನ್ನು ಗಟ್ಟಿಮಾಡಿಕೊಳ್ಳಬೇಕಿದೆಯೇ ಹೊರತು ಬೇರೆಯವರಿಗೆ ಆದರ್ಶದ ಪಾಠ ಮಾಡುವ ಶಿಕ್ಷಕರಾಗಬಾರದು' ಎಂದರು. ಈ ಟ್ವೀಟ್ ಭಾರಿ ವೈರಲ್ ಆಯಿತು.
ಇದಕ್ಕೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, 'ಒಬ್ಬ ರಶೀದ್ನಿಂದಾಗಿ ಇಡೀಯ ಮುಸ್ಲಿಂ ಸಮುದಾಯವನ್ನು ಕೆರಳುವಂತೆ ಮಾಡಿದ. ಒಂದು ಕಾರ್ಟೂನು ವಿಶ್ವದ ಮುಸ್ಲೀಮರು ಕೆರಳುವಂತೆ ಮಾಡಿತು. 'ಡಾ ವಿಂಚಿ ಕೋಡ್' ಎಂಬ ಒಂದು ಪುಸ್ತಕ ಕ್ರಿಸ್ತರನ್ನು ಕೆರಳಿಸಿತು. ನೀವು ಕೂಡ ಒಂದು ಏಟಿನಿಂದಾಗಿ ಮದುವೆ ಮುರಿದುಕೊಂಡಿರಿ (ತಪ್ಪಡ್ ಸಿನಿಮಾದಲ್ಲಿ). ಸಿನಿಮಾ ಸಂಭಾಷಣೆ ಹೇಳುವುದಕ್ಕೆ ನೀವು ನಿಮ್ಮನ್ನು ನಿಯಂತ್ರಿಸಿಕೊಳ್ಳಿ, ಉಳಿದ ಸಂಗತಿಗಳು ನಿಮ್ಮ ಜ್ಞಾನದಿಂದ ಹೊರಗಿವೆ' ಎಂದಿದ್ದಾರೆ ಪ್ರತಾಪ್ ಸಿಂಹ.
ತಾಪ್ಸಿ ಪನ್ನು ಟ್ವೀಟ್ಗೆ ಹಲವಾರು ಮಂದಿ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದಾರೆ. ನಟ ಅಭಯ್ ಡಿಯೋಲ್ ಇನ್ನೂ ಹಲವಾರು ಮಂದಿ ತಾಪ್ಸಿ ಪನ್ನುಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm