ಬ್ರೇಕಿಂಗ್ ನ್ಯೂಸ್
08-02-21 03:09 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಜೈಲ್ ಸೇರಿದ್ದ ರಾಗಿಣಿ ಜಾಮೀನಿನ ಮೇಲೆ ಬಂದಿದ್ದಾರೆ. ಸಿಸಿಬಿ ಕಚೇರಿಗೆ ಹಾಜರಾಗಿದ್ದ ನಟಿ ರಾಗಿಣಿ ಮಾಧ್ಯಮದ ಜೊತೆ ಮಾತನಾಡಿ, 'ತಾಳ್ಮೆಯಿಂದ ಕಾಯಿರಿ ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತಾಡುತ್ತೇನೆ' ಜಾಮೀನಿನ ಷರತ್ತಿನಂತೆ ನಟಿ ರಾಗಿಣಿ ಸಿಸಿಬಿ ಕಚೇರಿಗೆ ಹಾಜರಾಗಿದ್ದರು.
ತನಿಖಾಧಿಕಾರಿ ಪುನೀತ್ ಸಮಕ್ಷಮದಲ್ಲಿ ಸಹಿಮಾಡಿದ್ದಾರೆ. ಕಚೇರಿಯಿಂದ ಹೊರಬಂದು ಮಾಧ್ಯಮದವರ ಜೊತೆ ಮಾತನಾಡಿದ ರಾಗಿಣಿ, ' ನ್ಯಾಯಾಲಯ ಜಾಮೀನು ನೀಡುವಾಗ ವಿಧಿಸಿದ ಷರತ್ತಿನಂತೆ ಬಂದು ಸಹಿ ಮಾಡಿದ್ದೀನಿ ಅಷ್ಟೇ. ಬೇರೆ ಏನು ಇಲ್ಲ. ನಾನು ಬಿಡುಗಡೆಯಾದಾಗ ಪತ್ರಿಕಾಗೋಷ್ಠಿ ಮಾಡುತ್ತೇನೆ ಎಂದು ಹೇಳಿದ್ದೆ, ಈಗಲೂ ನಾನು ಅದನ್ನೇ ಹೇಳುತ್ತೇನೆ ತಾಳ್ಮೆಯಿಂದ ಕಾಯಿರಿ, ಸರಿಯಾದ ಸಮಯದಲ್ಲಿ ನಾನು ಪತ್ರಿಕಾಗೋಷ್ಠಿ ಮಾಡಿ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿ ಮಾಡಲು ರಾಗಿಣಿ ಯಾಕೆ ತಡಮಾಡುತ್ತಿದ್ದಾರೆ, ಯಾವೆಲ್ಲ ವಿಚಾರಗಳನ್ನು ಬಹಿರಂಗ ಪಡಿಸಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಅಂದಹಾಗೆ ರಾಗಿಣಿ ಸದ್ಯ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ರಾಗಿಣಿ ಮೊದಲ ಬಾರಿಗೆ ಕುಟುಂಬದ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದರು. ಪೂಜೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರೇ ಮಾಡಿದ್ದರು. ಇತ್ತೀಚಿಗೆ ರಾಗಿಣಿ ಅಪ್ಪ-ಅಮ್ಮನ ಜೊತೆಗೆ ಅಕ್ಕಿಪೇಟೆ ದರ್ಗಾಗೆ ಭೇಟಿ ನೀಡಿ ಅನ್ನದಾನ ಮಾಡಿದ್ದರು. ಈ ಸಮಯದಲ್ಲಿ ಮಾತನಾಡಿದ್ದ ರಾಗಿಣಿ ಸಿನಿಮಾಗಳ ಆಫರ್ ಗಳು ಬರುತ್ತಿವೆ. ಕಥೆಗಳನ್ನು ಕೇಳುತ್ತಿದ್ದೇನೆ, ಈ ತಿಂಗಳ ಅಂತ್ಯದಿಂದ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ 143 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm