ಬ್ರೇಕಿಂಗ್ ನ್ಯೂಸ್
09-02-21 03:05 pm Source: FILMIBEAT Shruthi Gk ಸಿನಿಮಾ
ಬಿಗ್ ಬಾಸ್ ಸೀಸನ್ 8 ಕನ್ನಡ ರಿಯಾಲಿಟಿ ಶೋಗಾಗಿ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಬಿಗ್ ಬಾಸ್ ಪ್ರಾರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಇದೆ. ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಈಗಾಗಲೇ ಸಾಕಷ್ಟು ಕಲಾವಿದರ ಹೆಸರುಗಳು ಜೋರಾಗಿ ಕೇಳಿಬರುತ್ತಿದೆ. ಸಂಭಾವ್ಯ ಸ್ಪರ್ಧಿಗಳ ಹೆಸರುಗಳಲ್ಲಿ ಕಿರುತೆರೆಯ ಖ್ಯಾತ ನಟಿ ಕಾವ್ಯಾ ಗೌಡ ಹೆಸರು ಕೇಳಿಬರುತ್ತಿದೆ. ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಗೌಡ ಇರಲಿದ್ದಾರೆ ಎನ್ನುವ ಮಾತು ಜೋರಾಗಿ ಕೇಳಿಬರುತ್ತಿದೆ. ಇದೇ ತಿಂಗಳು ಕೊನೆಯಲ್ಲಿ ಅಂದರೆ ಫೆಬ್ರವರಿ 28ರಂದು ಬಿಗ್ ಬಾಸ್ ಗ್ರ್ಯಾಂಡ್ ಆಗಿ ಓಪನ್ ಆಗಲಿದೆ.
ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಬ್ರಹ್ಮಗಂಟು ಖ್ಯಾತಿಯ ಗೀತಾ, ನಟ ಸುನಿಲ್ ರಾವ್, ಆಶಿಕಾ ರಂಗನಾಥ್ ಸಹೋದರಿ ಅನುಷಾ ರಂಗನಾಥ್ ಸೇರಿದಂತೆ ಸಾಕಷ್ಟು ಹೆಸರುಗಳು ಕೇಳಿಬರುತ್ತಿದೆ. ಆದರೆ ಬಗ್ಗೆ ಕಾವ್ಯಾ ಗೌಡ ಎಂಟ್ರಿ ಬಗ್ಗೆ ಸಹೋದರಿ ಭವ್ಯಾ ಗೌಡ ಸ್ಪಷ್ಟಪಡಿಸಿದ್ದಾರೆ.

ಕಾವ್ಯಾ ಗೌಡ ಈ ಬಾರಿಯ ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲ ಎಂದು ಹೇಳುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಭವ್ಯಾ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾವ್ಯಾ ಈ ಬಾರಿಯ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಭವ್ಯಾ ಇಲ್ಲ ಸುಳ್ಳು ಸುದ್ದಿ ಇದು ಎಂದು ಹೇಳಿದ್ದಾರೆ.
ಅಂದಹಾಗೆ ಬಿಗ್ ಬಾಸ್ ಮನೆಗೆ ಹೋಗುವವರು ಯಾರು ಬಹಿರಂಗವಾಗಿ ಹೇಳಿ ಹೋಗುವುದಿಲ್ಲ. ಹಾಗಾಗಿ ಕಾವ್ಯಾ ಈ ಬಾರಿ ಬಿಗ್ ಬಾಸ್ ನಲ್ಲಿ ಭಾಗಿಯಾಗಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ಗೊತ್ತಾಗಬೇಕಾದರೆ ಬಿಗ್ ಬಾಸ್ ಪ್ರಾರಂಭವಾಗುವ ವರೆಗೂ ಕಾಯಲೇ ಬೇಕು.
ಕಾವ್ಯಾ ಕೊನೆಯದಾಗಿ ರಾಧ ರಮಣ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಶ್ವೇತಾ ಪ್ರಸಾದ್ ಬಿಟ್ಟುಹೋದ ಜಾಗಕ್ಕೆ ಕಾವ್ಯಾ ಎಂಟ್ರಿ ಕೊಟ್ಟಿದ್ದರು. ರಾಧಾ ಮಿಸ್ ಆಗಿ ಕಾವ್ಯಾ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು. ಈ ಧಾರಾವಾಹಿ ಬಳಿಕ ಕಾವ್ಯಾ ಯಾವುದೇ ಸೀರಿಯಲ್ ನಲ್ಲೂ ಕಾಣಿಸಿಕೊಂಡಿಲ್ಲ. ಹಾಗಾಗಿ ಈ ಬಾರಿಯ ಬಿಗ್ ಬಾಸ್ ನಲ್ಲಿ ಇರಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm