ಬ್ರೇಕಿಂಗ್ ನ್ಯೂಸ್
 
            
                        10-02-21 03:53 pm Source: FILMIBEAT Bharath Kumar K ಸಿನಿಮಾ
 
            ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm